ಭಾರತ ಬಂದ್ ಸಹಜ ಸ್ಥಿತಿಯಲ್ಲಿ ಬಸವನಬಾಗೇವಾಡಿ ಪಟ್ಟಣ: ರಸ್ತೆಗಿಳಿಯದ ಸರಕಾರಿ ಬಸ್
ಲೋಕದರ್ಶನ ವರದಿ
ಬಸವನಬಾಗೇವಾಡಿ: ಕಾಂಗ್ರೆಸ್ ನೇತೃತ್ವದ ಮಿತ್ರಪಕ್ಷಗಳು ಕರೆ ನೀಡಿದ ಭಾರತ ಬಂದ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಟಿಪ್ಪು ಕ್ರಾಂತಿ ಸೇನೆ ಸಂಘಟನೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದನ್ನು ಹೊರತುಪಡಿಸಿದಂತೆ ಪಟ್ಟಣವು ಸೋಮವಾರ ಸಹಜ ಸ್ಥಿತಿಯಲ್ಲಿ ವಾರದ ಸಂತೆಯು ನಡೆಯಿತು.
ಸೋಮವಾರ ಎಂದಿನಂತೆ ವಾರದ ಸಂತೆಗೆ ಗ್ರಾಮೀಣ ಭಾಗದ ಜನತೆ ಪಟ್ಟಣಕ್ಕೆ ಖಾಸಗೀ ವಾಹನ-ಬೈಕ್ ಮುಖಾಂತರ ಸಂತೆಕಟ್ಟೆಗೆ ಆಗಮಿಸಿದರೇ ಅಂಗಡಿ-ಮುಗ್ಗಟ್ಟುಗಳು ಸಹಜಸ್ಥಿತಿಯಲ್ಲಿ ಎಂದಿನಂತೆ ವ್ಯಾಪಾರವಹಿವಾಟಿನಲ್ಲಿ ತಲ್ಲೀನವಾಗಿದ್ದು ಕಂಡು ಬಂತು, ಭಾರತ ಬಂದ್ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ಸಾರಿಗೆ ಸಂಸ್ಥೆಯ ಬಸ್ಗಳು ರಸ್ತೆಗಿಳಿಯದೇ ದೂರುಳಿದು ಪ್ರಯಾಣಿಕರಿಗೆ ಹಾಗೂ ಜನತೆಗೆ ಓಡಾಟಕ್ಕೆ ಸ್ವಲ್ಪ ತೊಂದರೆ ಅನುಭವಿಸುವಂತಾಯಿತು.
ಬಸ್ ಸಂಚಾರ ಸ್ಥಗೀತವಾದ ಕಾರಣದಿಂದ ಪ್ರಯಾಣಿಕರು ಖಾಸಗೀ ವಾಹನಗಳ ಓಡಾಟ ಅನಿವಾರ್ಯವಾಗಿದ್ದರಿಂದ ಪ್ರಯಾಣಿಕರು ದುಬಾರಿ ಬೆಲೆ ತೆತ್ತು ಪ್ರಯಾಣಿಸಬೇಕಾಯಿತು, ಬಸ್ ಸಂಚಾರ ನಂಬಿ ಬಂದ ಕೇಲ ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಧ್ವನಿವರ್ಧಕದಲ್ಲಿ ಜಾಹೀರಾತು ಹಾಗೂ ಎಫ್ಎಂ ರೇಡಿಯೋ ಕಾರ್ಯಕ್ರಮಗಳು ಪ್ರಸಾರವಾಗುತ್ತಿರುವದನ್ನು ನಂಬಿ ಬಸ್ಗಾಗಿ ಕಾಯ್ದು ಕುಳಿತು ನಂತರ ಸಿಬ್ಬಂದಿ ವಿಚಾರಿಸಿ ಬಂದ ದಾರಿಗೆ ಸುಂಕವಿಲ್ಲ ಎಂದು ಮರಳಿದ್ದು ಕಂಡು ಬಂತು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 