ಬಸವಣ್ಣ, ಸ್ವಾಮಿ ವಿವೇಕಾನಂದರನ್ನು ಕೊಲೆ ಮಾಡಲಾಗಿದೆ: ಪ್ರೋ.ಭಗವಾನ್
ಮೈಸೂರು: ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗುವ ಪ್ರಗತಿಪರ ಚಿಂತಕ ಕೆಎಸ್ ಭಗವಾನ್ ಇದೀಗ ಕಾಯಕ ಯೋಗಿ ಬಸವಣ್ಣ ಮತ್ತು ಸ್ವಾಮಿ ವಿವೇಕಾನಂದರನ್ನು ಪಿತೂರಿ ಮಾಡಿ ಕೊಲೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಜಗಜ್ಯೋತಿ ಬಸವೇಶ್ವರ ಅವರು ಸಾಯುವ ಹಿಂದಿನ ದಿನ ತುಂಬಾ ಆರೋಗ್ಯಕರವಾಗಿದ್ದರು. ಹಾಗಾಗಿ ಬಸವಣ್ಣರನ್ನು ಕೊಲೆ ಮಾಡಲಾಗಿದೆ ಎಂಬುದು ನನ್ನ ಅಭಿಪ್ರಾಯ. ಬಸವಣ್ಣನವರು ಹಿಂದೂ ಧರ್ಮವನ್ನು ಕಟುವಾಗಿ ಟೀಕಿಸಿದ್ದು ಬೌದ್ಧ ಧರ್ಮದ ಪರ ಒಲುವಿತ್ತು. ಬಸವಣ್ಣರ ಚಳುವಳಿಯನ್ನು ಸಹಿಸದವರೇ ಅವರನ್ನು ಕೊಲೆ ಮಾಡಿದ್ದಾರೆ. ಇನ್ನು ಐಕ್ಯರಾಗಿದ್ದಾರೆ ಎಂಬುವುದು ಶುದ್ಧ ಸುಳ್ಳ ಎಂದು ವಾದಿಸಿದ್ದಾರೆ.
ಇನ್ನು ಪಿತೂರಿ ಮಾಡಿ ಸ್ವಾಮಿ ವಿವೇಕನಂದರನ್ನು ಕೊಲೆ ಮಾಡಲಾಗಿದೆ. ಸ್ವಾಮಿ ವಿವೇಕನಂದರು ನಿಜವಾದ ಸನ್ಯಾಸಿಗಳು. ಅವರು ಎರಡನೇ ಗೌತಮ ಬುದ್ಧ. ರಾತ್ರಿ ಎಲ್ಲ ಚೆನ್ನಾಗಿದ್ದ ವಿವೇಕಾನಂದರು ಬೆಳಗ್ಗೆ ನೋಡುವಾಗ ಕುಳಿತಲ್ಲೇ ಪ್ರಾಣ ಬಿಟ್ಟರು ಅಂದರೆ ನಂಬೋದಕ್ಕೆ ಆಗುತ್ತಾ? ಬಡವರಿಗಾಗಿ ಕೆಲಸ ಮಾಡಬೇಕು ಎಂದು ಚಿಂತಿಸುತ್ತಿದ್ದ ವಿವೇಕಾನಂದರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಭಗವಾನ್ ಸಂಶಯ ವ್ಯಕ್ತಪಡಿಸಿದ್ದಾರೆ.
ಬಸವಣ್ಣ ಮತ್ತು ವಿವೇಕಾನಂದರನ್ನು ಪಿತೂರಿ ಮಾಡಿ ಕೊಲೆ ಮಾಡಲಾಗಿದೆ ಎಂಬ ಭಗವಾನ್ ರ ಹೇಳಿಕೆ ಇದೀಗ ತೀವ್ರ ಚಚರ್ೆಗೆ ಗ್ರಾಸವಾಗಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 