ಶ್ರದ್ಧಾಭಕ್ತಿಯಿಂದ ಜರುಗಿದ ಬಸವಣ್ಣ-ವೀರಭದ್ರೇಶ್ವರ ರಥೋತ್ಸವ!
Basavanna-Veerabhadreshwara chariot festival celebrated with devotion!
ಲೋಕದರ್ಶನ ವರದಿ
ಮುಂಡಗೋಡ 28 : ಪಟ್ಟಣದ ಆರಾಧ್ಯ ದೈವಗಳಾದ ಬಸವಣ್ಣ ಹಾಗೂ ವೀರಭದ್ರೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವವು ಶುಕ್ರವಾರ ಸಂಜೆ ಅಪಾರ ಭಕ್ತಿಭಾವ ಮತ್ತು ಸಡಗರ-ಸಂಭ್ರಮದೊಂದಿಗೆ ಅದ್ದೂರಿಯಾಗಿ ನೆರವೇರಿತು. ಶಾಸಕ ಶಿವರಾಮ ಹೆಬ್ಬಾರ ಅವರು ರಥೋತ್ಸವಕ್ಕೆ ಚಾಲನೆ ನೀಡಿದ್ದು, ಬಂಕಾಪುರದ ಅರಳೆಲೆ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯರು ಹಾಗೂ ಮುಂಡಗೋಡ ಹಿರೇಮಠದ ವೇದಮೂರ್ತಿ ರುದ್ರಮುನಿ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಿದರು.
ದೇವಸ್ಥಾನದ ಆವರಣದಿಂದ ಆರಂಭವಾದ ಭವ್ಯ ರಥ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು. ಈ ವೇಳೆ ಪಂಚವಾದ್ಯ, ವೀರಗಾಸೆ, ಡೊಳ್ಳು ಕುಣಿತ ಹಾಗೂ ವಿವಿಧ ವೇಷಧಾರಿ ಕಲಾವಿದರ ನೃತ್ಯಗಳು ಮೆರಗು ತಂದವು. ವಿಶೇಷವಾಗಿ ಜಾಂಜ್ ಮೇಳದ ಲಯಬದ್ಧ ವಾದನವು ಭಕ್ತರನ್ನು ಆಕರ್ಷಿಸಿತು. ಬಸವನಬೀದಿಯಿಂದ ಬನ್ನಿ ಮಹಾಕಾಳಿ ದೇವಸ್ಥಾನದವರೆಗೆ ಸಾಗಿದ ಮೆರವಣಿಗೆಯಲ್ಲಿ ಭಕ್ತರು ಜಯಘೋಷಗಳನ್ನು ಕೂಗಿ ಸಂಭ್ರಮಿಸಿದರು.
ತಮ್ಮ ಹರಕೆಯಂತೆ ರಥದ ಮೇಲೆ ಬಾಳೆಹಣ್ಣು, ಉತ್ತುತ್ತಿ ಹಾಗೂ ವಿವಿಧ ದವಸ-ಧಾನ್ಯಗಳನ್ನು ಎಸೆಯುವ ಮೂಲಕ ಭಕ್ತಿ ಸಮರ್ಿಸಿದರು. ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಡೆದ ಈ ರಥೋತ್ಸವವು ಪಟ್ಟಣದ ಧಾರ್ಮಿಕ ಏಕತೆ ಹಾಗೂ ಸಮೃದ್ಧ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿ ಗಮನಸೆಳೆಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 