ಬಸವಣ್ಣನವರು ಒಂದು ಶಕ್ತಿ: ಡಾ. ಎಸ್.ಪಿ. ತಳವಾರ
Basavanna is a force: Dr. S.P. Talawara
ಲೋಕದರ್ಶನ ವರದಿ
ಕಾಗವಾಡ 23: ಒಂದು ಶಕ್ತಿಯಾಗಿದ್ದ ಬಸವಣ್ಣನವರು ಸಮಾನತೆಯ ಸಮಾಜ ಕಟ್ಟಲು ಮುಂದಾದವರು. ಜಿಡ್ಡುಗಟ್ಟಿದ ಸಮಾಜಕ್ಕೆ ಚೈತನ್ಯ ತಂದುಕೊಟ್ಟ ಶಕ್ತಿಯಾಗಿದ್ದರು ಎಂದು ಪ್ರಾಚಾರ್ಯ ಡಾ. ಎಸ್.ಪಿ. ತಳವಾರ ತಿಳಿಸಿದ್ದಾರೆ.
ಅವರು, ಸೋಮವಾರ ದಿ. 20 ರಂದು ಪಟ್ಟಣದ ಶಿವಾನಂದ ಮಹಾವಿದ್ಯಾಲಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಬಸವಣ್ಣನವರು ಪ್ರತಿಪಾದಿಸಿದ ವಿಚಾರಗಳು ಇಂದಿನ ಭಾರತೀಯ ಸಂವಿಧಾನದ ಮೂಲಭೂತ ಆಶಯಗಳಾದ ಸಮಾನತೆ, ಸ್ವಾತಂತ್ರ್ಯ, ನ್ಯಾಯದ ಅಡಿಪಾಯವಾಗಿವೆ ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರೊ. ಜೆ.ಕೆ. ಪಾಟೀಲ ಮಾತನಾಡಿ, 12ನೇ ಶತಮಾನದ ಮಹಾನ ಸಮಾಜ ಸುಧಾರಕ, ತತ್ವಜ್ಞಾನಿ ಮತ್ತು ವಚನಕಾರ ಬಸವಣ್ಣನವರು ಸಾಮಾಜಿಕ ಸಮಾನತೆ, ಲಿಂಗ ತಾರತಮ್ಯದ ನಿರ್ಮೂಲನೆ ಮತ್ತು ಮೂಢನಂಬಿಕೆಗಳ ವಿರುದ್ಧ ಹೋರಾಡಿದ ಕ್ರಾಂತಿಕಾರಿ ನಾಯಕರು. ಅವರು ಇಷ್ಟಲಿಂಗ ಪೂಜೆಯನ್ನು ಪರಿಚಯಿಸಿ, ಅನುಭವಮಂಟಪದ ಮೂಲಕ ಜ್ಞಾನಪ್ರಸಾರ ಮಾಡಿದರು. ಕಾಯಕವೇ ಕೈಲಾಸ ಎಂಬ ತತ್ವದಡಿ ಕಾಯಕ ಮಹತ್ವವನ್ನು ಸಾರಿದರು ಎಂದು ತಿಳಿಸಿದರು.
ಈ ವೇಳೆ ಪ್ರೊ. ಆರ್.ಎಸ್. ನಾಗರಡ್ಡಿ, ಪ್ರೊ. ಎಸ್.ಎಸ್. ಫಡತರೆ, ಪ್ರೊ. ಬಿ.ಡಿ. ದಾಮನ್ನವರ, ಪ್ರೊ ಎನ್.ಎಂ. ಬಾಗೇವಾಡಿ, ಪ್ರೊ .ಎ.ಎ. ಪಾಟೀಲ ಸೇರಿದಂತೆ ಸಮಸ್ತ ಬೋಧಕ- ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 