ಬಸವರಾಜ್ ಈಳಿಗನೂರು ಗೆ ಡಾಕ್ಟರೇಟ್ ಪದವಿ
Basavaraj Eliganur receives doctorate degree
ಬಸವರಾಜ್ ಈಳಿಗನೂರು ಗೆ ಡಾಕ್ಟರೇಟ್ ಪದವಿ
ಕೊಪ್ಪಳ 04: ಗಂಗಾವತಿ ತಾಲೂಕಿನ ಈಳಿಗನೂರಿನ ಬಸವರಾಜ್ ಇವರಿಗೆ ಬಳ್ಳಾರಿ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾಲಯದಿಂದ ಪಿ.ಎಚ್.ಡಿ. ಪದವಿ ಲಭಿಸಿದೆ.ಬಾಲ್ಯದಲ್ಲಿ ಕಡು ಕಷ್ಟವನ್ನು ಅನುಭವಿಸಿ ಗಂಗಾವತಿಯ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಓದಿ, ಖಏಓಉ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಗಂಗಾವತಿಯಲ್ಲಿ ಪದವಿ ಮುಗಿಸಿಕೊಂಡು ಬಳ್ಳಾರಿ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿ ಅದೇ ವಿಶ್ವವಿದ್ಯಾಲಯದಲ್ಲಿ ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕರಾಗಿ ನೇಮಕಾತಿ ಹೊಂದಿ ಈಗ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಗಂಗಾವತಿಯ ಗ್ರಾಮೀಣ ಭಾಗದ ಇಳಿಗನೂರು ಗ್ರಾಮದ ಬಸವರಾಜ್ ರವರಿಗೆ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಚಾರ್ಯರಾದ ಬಸಪ್ಪ ನಾಗೋಲಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಸದಸ್ಯರಾದ ರಮೇಶ ಗಬ್ಬೂರ್, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ರಾದ ರುದ್ರ್ಪ ಭಂಡಾರಿ, ಪ್ರಧಾನ ಕಾರ್ಯದರ್ಶಿಗಳಾದ ಡಾ. ಮಹಾಂತೇಶ್ ನೆಲಾಗಣಿ, ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಲಿಂಗಣ್ಣ ಜಂಗಮರಹಳ್ಳಿ ಮತ್ತು ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಅವರಿಗೆ ಶುಭ ಕೋರಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 