ಬಸವರಾಜ.ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

ಬಸವರಾಜ.ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ  Basavaraj.K. Selected for the state level

ಹೊಸಪೆಟೆ 13: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ಉಪನಿರ್ದೇಶಕರ ಕಾರ್ಯಾಲಯ ವಿಜಯನಗರ ಜಿಲ್ಲೆ, ಹೊಸಪೇಟೆ ವತಿಯಿಂದ ವಿಜಯನಗರ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗಾಗಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳ “ಆಶುಭಾಷಣ ಸ್ಪರ್ಧೆ”ಯಲ್ಲಿ ಬಸವರಾಜ. ಕೆ. ಮುಖ್ಯಗುರುಗಳು ಸ.ಕಿ.ಪ್ರಾ.ಶಾಲೆ 88-ಮುದ್ಲಾಪುರ, ಹೊಸಪೇಟೆರವರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  

ಎರಡನೇ ಬಾರಿಗೆ ರಾಜ್ಯಮಟ್ಟದಲ್ಲಿ ಆಶುಭಾಷಣ ಸ್ಪರ್ಧೆಯಲ್ಲಿ ವಿಜಯನಗರ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಶ್ರೀಯುತ ಬಸವರಾಜ.ಕೆ.ರವರಿಗೆ ಇಲಾಖೆಯ ಅಧಿಕಾರಿಗಳು, ವಿಜಯನಗರ ಜಿಲ್ಲಾ ನೌಕರರ ಸಂಘ, ಶಿಕ್ಷಕರ ಸಂಘ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು, ಶಿಕ್ಷಕರು, ಹಿತೈಶಿಗಳು ಅಭಿನಂಧನೆ ತಿಳಿಸಿ ರಾಜ್ಯ ಮಟ್ಟಕ್ಕೆ ಶುಭಹಾರೈಸಿರುತ್ತಾರೆ.