ಕಾರಿನಲ್ಲಿ ಬಿಟ್ಟು ಹೋದ ಲ್ಯಾಟ್ ಟಾಪ್ ಮೊಬೈಲ್ ಮರಳಿಸಿ ಪ್ರಾಮಾಣಿಕತೆ ಮೆರೆದ ಬಸವರಾಜ್ ಸಂಗಮೇಶ್ವರ
Basavaraj Sangameshwara showed his honesty by returning the laptop he left in the car.
ಕಾರಿನಲ್ಲಿ ಬಿಟ್ಟು ಹೋದ ಲ್ಯಾಟ್ ಟಾಪ್ ಮೊಬೈಲ್ ಮರಳಿಸಿ ಪ್ರಾಮಾಣಿಕತೆ ಮೆರೆದ ಬಸವರಾಜ್ ಸಂಗಮೇಶ್ವರ
ಮುಂಡಗೋಡ 18 : ಟಿಬೇಟಿಯನ್ ಕ್ಯಾಂಪ್ ಲಾಮಾ ಗುರೂಜಿ ರವರು ಗುರುವಾರ ಹುಬ್ಬಳಿಗೆ ಹೋಗುವಾಗ ಕಾರಿನಲ್ಲಿ ಬಿಟ್ಟು ಹೋಗಿದ್ದ ಲ್ಯಾಪ್ ಟಾಪ್ ಹಾಗೂ ಮೊಬೈಲ್ ನ್ನು ಶುಕ್ರವಾರ ಮರಳಿ ನೀಡುವ ಮೂಲಕ ಸಾಮಾಜಿಕ ಕಾರ್ಯಕರ್ತ ಬಸವರಾಜ ಸಂಗಮೇಶ್ವರ ಪ್ರಾಮಾಣಿಕತೆ ಮೆರೆದಿದ್ದಾರೆ. ಗುರುವಾರ ಬಸವರಾಜ ಅವರು ತಮ್ಮ್ ಕಾರಿನಲ್ಲಿ ಹುಬ್ಬಳ್ಳಿಗೆ ಹೋಗುತ್ತಿದ್ದ ವೇಳೆ ಇಬ್ಬರು ಬೌದ್ಧ ಬಿಕ್ಕುಗಳ ತಾವು ಹುಬ್ಬಳ್ಳಿಗೆ ಹೋಗುತ್ತಿದ್ದು, ಅಲ್ಲಿಯವರೆಗೆ ಬಿಡುವಂತೆ ಹೇಳಿದಾಗ ಕರೆದುಕೊಂಡು ಹೋಗಿದ್ದಾರೆ. ನಂತರ ಹುಬ್ಬಳ್ಳಿ ತಲುಪಿದಾಗ ಲಾಮ್ ಗುರೂಜಿಯ್ ಲ್ಯಾಪ್ ಟಾಪ್ ಹಾಗೂ ಮೊಬೈಲ್ ಇರುವ ಬ್ಯಾಗನ್ನು ಕಾರಿನಲ್ಲೇ ಬಿಟ್ಟು ಹೋಗಿದ್ದಾರೆ. ಶುಕ್ರವಾರ ಬೆಳಗ್ಗೆ ಕಾರಿನಲ್ಲಿ ಬ್ಯಾಗ್ ಇರುವುದನ್ನು ನೋಡಿದ ಬಸವರಾಜ ಕೂಡಲೇ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾರೆ. ಇಬ್ಬರು ಬೌದ್ಧ ಬಿಕ್ಕುಗಳನ್ನು ಪತ್ತೆ ಹಚ್ಚಿದ ಪೊಲೀಸರು ಠಾಣೆಗೆ ಕರೆಯಿಸಿ ಸಾಮಾಜಿಕ ಕಾರ್ಯಕರ್ತ ಬಸವರಾಜ ಸಂಗಮೇಶ್ವರ ಅವರ ಸಮ್ಮುಖದಲ್ಲಿ ಲ್ಯಾಪ್ ಟಾಪ್ ಹಾಗೂ ಮೊಬೈಲ್ನ್ನು ಹಸ್ತಾಂತರಿಸಿದ್ದಾರೆ. ಈ ವೇಳೆ ಸಿಪಿಐ ರಂಗನಾಥ ನೀಲಮ್ಮನವರ ಹಾಗೂ ಸಿಬ್ಬಂದಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 