ಬಸವರಾಜ ರಾಯರ ಜನ್ಮದಿನ; ಉಚಿತ ಆರೋಗ್ಯ ತಪಾಸಣಾ ಶಿಬಿರ
Basavaraja Raya's birthday; Free health check-up camp
ಲೋಕದರ್ಶನ ವರದಿ
ಮಹಾಲಿಂಗಪುರ 15: ಸ್ಥಳೀಯ ಪುರಸಭಾ ಮಾಜಿ ಅಧ್ಯಕ್ಷ ಬಸವರಾಜ ರಾಯರ ಅವರ ಜನ್ಮ ದಿನದ ಅಂಗವಾಗಿ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಅವರ ನೇತೃತ್ವದಲ್ಲಿ ಸ್ಥಳೀಯ ಸಾಧು ನಿರಂಜನ ಸಮುದಾಯ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಿತು.
ಜಯಸಿಂಗಪುರದ ಪಯೋಸ್ ಆಸ್ಪತ್ರೆ ಮತ್ತು ಅಥಣಿಯ ಐ ಕೇರ್ ಆಸ್ಪತ್ರೆಯ ವೈದ್ಯರು ಬಿಪಿಎಲ್ ಕಾರ್ಡ್ ಹೊಂದಿದ ನೂರಾರು ರೋಗಿಗಳಿಗೆ ಹೃದಯ, ಬೆನ್ನು, ಮೊಣಕಾಲು, ಮೂತ್ರ ಮತ್ತು ಕಣ್ಣು ಮುಂತಾದ ಖಾಯಿಲೆಗಳ ಉಚಿತ ತಪಾಸಣೆ ಮತ್ತು ಉಚಿತ ಓಷಧಿ ವಿತರಣೆ ಮಾಡಿದರು.
ಬಸವರಾಜ ರಾಯರ ಓಷಧ ವಿತರಿಸುವ ಮೂಲಕ ಶಿಬಿರ ಉದ್ಘಾಟಿಸಿದರು. ಅರ್ಬನ್ ಬ್ಯಾಂಕ್ ನಿರ್ದೇಶಕ ಅಶೋಕ ಅಂಗಡಿ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮಹಾಲಿಂಗ ಮಾಳಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತ ಬಂಡಿವಡ್ಡರ, ಮುಖಂಡರಾದ ಮಹಾದೇವ ಕಡಬಲ್ಲವರ, ಲಕ್ಕಪ್ಪ ಭಜಂತ್ರಿ, ಡಾ.ಸಾರಿಕಾ ಪಾಟೀಲ, ಡಾ.ಕುಲಕರ್ಣಿ ಇತರರಿದ್ದರು.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 