ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಬಸವರಾಜ ಆಯ್ಕೆ

ನೌಕರರ ಸಂಘದ  ನೂತನ ಜಿಲ್ಲಾಧ್ಯಕ್ಷ ಬಸವರಾಜ  ಆಯ್ಕೆ Basavaraja elected as new district president of employees' association

ಬೆಳಗಾವಿ 21: ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ  ಬಸವರಾಜ ಹಳಿಂಗಳಿ ಅವರು ಇಂದು ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಅವರನ್ನು ಭೇಟಿಯಾಗಿ , ಆಶೀರ್ವಾದ ಪಡೆದರು. 

ಶ್ರೀ ಸಿದ್ಧರಾಮೇಶ್ವರ ಐ.ಟಿ.ಐ. ಕಾಲೇಜಿನ ಪ್ರಾಧ್ಯಾಪಕರಾಗಿ  ಸೇವೆ ಸಲ್ಲಿಸುತ್ತಿರುವ ಬಸವರಾಜ ಹಳಿಂಗಳಿ ಅವರನ್ನು ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ   ಹಿನ್ನಲ್ಲೆಯಲ್ಲಿ ಗದುಗಿನ ಜಗದ್ಗುರು ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹಾಗೂ ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು  ಸನ್ಮಾನಿಸಿ ಶುಭ ಹಾರೈಸಿದರು.