ಬಸವಶಾಂತಲಿಂಗ ಸ್ವಾಮಿ ಹುಟ್ಟು ಹಬ್ಬ ಆಚರಣೆ
Basavashantalinga Swamy's birthday celebration
ಹಾವೇರಿ 05: ಗೌರವ-ಸನ್ಮಾನಗಳು ವ್ಯಕ್ತಿಯ ಸ್ಥಾನಮಾನಗಳ ಜವಾಬ್ದಾರಿಯನ್ನು ಹೆಚ್ಚಿಸುತ್ತೇವೆ ಎಂದು ಹೊಸಮಠದ ಶ್ರೀ ಬಸವಶಾಂತಲಿಂಗ ಸ್ವಾಮಿಗಳು ಹೇಳಿದರು. ನಗರದ ಶ್ರೀಮಠದಲ್ಲಿ ತಮ್ಮ ಹುಟ್ಟು ಹಬ್ಬದ ನಿಮಿತ್ತವಾಗಿ ಮಠದ ಸದ್ಭಕ್ತರಿಂದ ಗೌರವ ಸನ್ಮಾನ ಸ್ವೀಕರಿಸಿ ಅವರು ಹಿತವಚನದ ಮಾತನಾಡಿದರು.
ಹುಟ್ಟು ಹಬ್ಬದ ಆಚರಣೆ ಸಾಂಕೇತಿಕವಾಗಿರಲಿದ್ದು, ನಮ್ಮ ಬದುಕಿನಲ್ಲಿ ಒಂದು ವರ್ಷ ಕಳೆಯಿತು ಎಂಬ ಆತ್ಮವಲೋಕನ ಮಾಡಿಕೊಳ್ಳುವ ದಿನವಾಗಬೇಕಿದೆ. ಬದುಕಿಗೆ ಮುನ್ನುಡಿಯಾಗಬೇಕು. ಹುಟ್ಟು ಹಬ್ಬ ಪ್ರತಿಯೊಬ್ಬರಿಗೂ ಸ್ಮರಣೀಯ ದಿನವಾಗಿದೆ. ಉತ್ತಮ ಸಮಾಜಮುಖಿ ಕೆಲಸಗಳ ಹಾಗೂ ಮಹಾನ್ ನಾಯಕರ ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡು ಸಮಾಜಮುಖಿ ವ್ಯಕ್ತಿಯಾಗಿ ಬೆಳೆಯುವ ಕೆಲಸ ಮಾಡಿದಾಗ ಹುಟ್ಟು ಹಬ್ಬ ಆಚರಣೆಗೆ ಅರ್ಥ ಬರಲಿದೆ. ಮಠದ ಸದ್ಭಕ್ತರು ನನ್ನ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದೀರಿ ಎಲ್ಲರಿಗೂ ಧನ್ಯವಾದಗಳು ಸಲ್ಲಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಸಮಾಜ ಸೇವಕರಾದ ಪರಶುರಾಮ ಹರ್ಲಾಪುರ, ಅಮ್ಮಾ ಸಂಸ್ಥೆ(ರಿ)ಯ ನಿಂಗಪ್ಪ ಆರೇರ, ಶ್ರೀ ಮಠದ ಸದ್ಭಕ್ತರು ಹಾಗೂ ಶಿಷ್ಯ ಬಳಗದವರು ಪಾಲ್ಗೊಂಡಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 