ಬಸವಶಾಂತಲಿಂಗ ಸ್ವಾಮಿ ಹುಟ್ಟು ಹಬ್ಬ ಆಚರಣೆ
Basavashantalinga Swamy's birthday celebration
ಹಾವೇರಿ 05: ಗೌರವ-ಸನ್ಮಾನಗಳು ವ್ಯಕ್ತಿಯ ಸ್ಥಾನಮಾನಗಳ ಜವಾಬ್ದಾರಿಯನ್ನು ಹೆಚ್ಚಿಸುತ್ತೇವೆ ಎಂದು ಹೊಸಮಠದ ಶ್ರೀ ಬಸವಶಾಂತಲಿಂಗ ಸ್ವಾಮಿಗಳು ಹೇಳಿದರು. ನಗರದ ಶ್ರೀಮಠದಲ್ಲಿ ತಮ್ಮ ಹುಟ್ಟು ಹಬ್ಬದ ನಿಮಿತ್ತವಾಗಿ ಮಠದ ಸದ್ಭಕ್ತರಿಂದ ಗೌರವ ಸನ್ಮಾನ ಸ್ವೀಕರಿಸಿ ಅವರು ಹಿತವಚನದ ಮಾತನಾಡಿದರು.
ಹುಟ್ಟು ಹಬ್ಬದ ಆಚರಣೆ ಸಾಂಕೇತಿಕವಾಗಿರಲಿದ್ದು, ನಮ್ಮ ಬದುಕಿನಲ್ಲಿ ಒಂದು ವರ್ಷ ಕಳೆಯಿತು ಎಂಬ ಆತ್ಮವಲೋಕನ ಮಾಡಿಕೊಳ್ಳುವ ದಿನವಾಗಬೇಕಿದೆ. ಬದುಕಿಗೆ ಮುನ್ನುಡಿಯಾಗಬೇಕು. ಹುಟ್ಟು ಹಬ್ಬ ಪ್ರತಿಯೊಬ್ಬರಿಗೂ ಸ್ಮರಣೀಯ ದಿನವಾಗಿದೆ. ಉತ್ತಮ ಸಮಾಜಮುಖಿ ಕೆಲಸಗಳ ಹಾಗೂ ಮಹಾನ್ ನಾಯಕರ ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡು ಸಮಾಜಮುಖಿ ವ್ಯಕ್ತಿಯಾಗಿ ಬೆಳೆಯುವ ಕೆಲಸ ಮಾಡಿದಾಗ ಹುಟ್ಟು ಹಬ್ಬ ಆಚರಣೆಗೆ ಅರ್ಥ ಬರಲಿದೆ. ಮಠದ ಸದ್ಭಕ್ತರು ನನ್ನ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದೀರಿ ಎಲ್ಲರಿಗೂ ಧನ್ಯವಾದಗಳು ಸಲ್ಲಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಸಮಾಜ ಸೇವಕರಾದ ಪರಶುರಾಮ ಹರ್ಲಾಪುರ, ಅಮ್ಮಾ ಸಂಸ್ಥೆ(ರಿ)ಯ ನಿಂಗಪ್ಪ ಆರೇರ, ಶ್ರೀ ಮಠದ ಸದ್ಭಕ್ತರು ಹಾಗೂ ಶಿಷ್ಯ ಬಳಗದವರು ಪಾಲ್ಗೊಂಡಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 