ಬಸವೇಶ್ವರ-ಶಂಕರಾಚಾರ್ಯ ಜಯಂತಿ ಅರ್ಥಪೂರ್ಣ ಮತ್ತು ವಿಜೃಂಭಣೆಯಿಂದ ಆಚರಣೆ -ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್
Basaveshwara-Shankaracharya Jayanti celebrated with meaning and grandeur - Additional Deputy Commiss
ಲೋಕದರ್ಶನ ವರದಿ
ಹಾವೇರಿ 08: ಜಿಲ್ಲಾಡಳಿತದಿಂದ ಜಗಜ್ಯೋತಿ ಶ್ರೀ ಬಸವೇಶ್ವರ ಹಾಗೂ ಶ್ರೀ ಶಂಕರಾಚಾರ್ಯ ಜಯಂತಿಗಳ ಕಾರ್ಯಕ್ರಮ ಅರ್ಥಪೂರ್ಣ ಹಾಗೂ ವಿಜೈಂಭಣೆಯಿಂದ ಆಚರಣೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಗಜ್ಯೋತಿ ಶ್ರೀ ಬಸವೇಶ್ವರ, ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮಾಜದ ಮುಖಂಡರೊಂದಿಗೆ ಚರ್ಚಿಸಿ, ಶ್ರೀ ಬಸವೇಶ್ವರ ಜಯಂತಿ ಏಪ್ರಿಲ್ 20 ರಂದು ಬೆಳಿಗ್ಗೆ 9 ಗಂಟೆಗೆ ಬಸವೇಶ್ವರ ಪುತ್ಥಳಿಗೆ ಮಾಲಾರೆ್ಣ, ಬೆಳಿಗ್ಗೆ 10 ಗಂಟೆಗೆ ಹಾವೇರಿ ನಗರದ ಶ್ರೀ ಹುಕ್ಕೇರಿಮಠದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಸಂಜೆ 4 ಗಂಟೆಗೆ ಬಸವೇಶ್ವರ ಭಾವಚಿತ್ರ ಮೆರವಣಿಗೆ, ಶ್ರೀ ಶಂಕರಾಚಾರ್ಯ ಜಯಂತಿ ಏ.21 ರಂದು ಹಾವೇರಿ ನಗರದ ಸೀತಾರಾಮ ಮಂಗಲ ಕಾರ್ಯಾಲಯದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಸಂಜೆ 4 ಗಂಟೆಗೆ ಶಂಕರ ಭಾರತಿ ಮಠದಿಂದ ಭಾವಚಿತ್ರ ಮೆರವಣಿಗೆ ನಡೆಸಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಮಹನೀಯರ ಭಾವಚಿತ್ರ ಮೆರವಣಿಗೆ, ಪೊಲೀಸ್ ಬಂದೋಬಸ್ತ್, ಕಲಾ ತಂಡಗಳ ನೇಮಕ, ಉಪನ್ಯಾಸಕರು, ಆಮಂತ್ರಣ ಪತ್ರಿಕೆ, ವೇದಿಕೆ, ಧ್ವನಿ-ಬೆಳಕು, ಆಸನ, ಕುಡಿಯುವ ನೀರು, ಉಪಹಾರ, ವ್ಯವಸ್ಥೆಯನ್ನು ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಸಮನ್ವಯದಿಂದ ಮಾಡಬೇಕೆಂದು ಸಲಹೆ ನೀಡಿದರು. ಈ ಮಹನೀಯರ ಜಯಂತಿಯನ್ನು ಎಲ್ಲ ಶಾಲಾ-ಕಾಲೇಜುಗಳಲ್ಲಿ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಆಚರಣೆ ಮಾಡಲು ಆದೇಶ ಹೊರಡಿಸಲಾಗುವುದು ಎಂದರು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 