ಮಕ್ಕಳ ಸಹಾಯವಾಣಿ ಮಾಹಿತಿ ಆಧರಿಸಿ
ಧಾರವಾಡ 20: ಬೆಂಗಳೂರಿನ
ಮಕ್ಕಳ ಸಹಾಯವಾಣಿ 1098ಗೆ, ಅಕ್ಟೋಬರ್
19 ರ ಸಂಜೆ ಬಂದ ಮಾಹಿತಿ
ಆಧರಿಸಿ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ಇಂದು ಅ.20 ರಂದು
ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ತಡೆಯುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಶಿವಳ್ಳಿ
ಗ್ರಾಮದ ಪ್ಲಾಟ್ ಪ್ರದೇಶದ ಬಾಲಕಿಯೊಬ್ಬಳನ್ನು ಬೆಳಗಾವಿ ಜಿಲ್ಲೆಯ ಕಿತ್ತೂರಿನ ಸಂಬಂಧಿಕ ಯುವಕನೊಂದಿಗೆ ಮದುವೆ ಮಾಡಲು ನಿರ್ಧರಿಸುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ
ಅಧಿಕಾರಿಗಳು, ಸ್ಥಳೀಯ ಅಂಗನವಾಡಿ ಕಾರ್ಯಕತರ್ೆಯರೊಂದಿಗೆ ಇಂದು ಬಾಲಕಿಯ ಮನೆಗೆ
ಭೇಟಿ ನೀಡಿ ವಿಚಾರಣೆ ನಡೆಸಿದರು.
ಬಾಲಕಿಯ ಪಾಲಕರು ತಮ್ಮ ಮಗಳಿಗೆ 18 ವರ್ಷ
ತುಂಬುವವರೆಗೂ ಮದುವೆ ಮಾಡುವದಿಲ್ಲ, ಕಾನೂನು ಉಲ್ಲಂಘಿಸುವದಿಲ್ಲ ಎಂದು ಒಪ್ಪಿ ಲಿಖಿತವಾಗಿ ಮಾಹಿತಿ ನೀಡಿದ್ದಾರೆ.
ಜಿಲ್ಲೆಯ
ಯಾವುದೇ ಭಾಗದಲ್ಲಿ ಬಾಲ್ಯವಿವಾಹ, ಬಾಲಕಾಮರ್ಿಕ ಪದ್ಧತಿಗಳು ಸೇರಿದಂತೆ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುವಂತಹ ಯಾವುದೇ ಪ್ರಕರಣಗಳು ಕಂಡು ಬಂದರೆ ಸಾರ್ವಜನಿಕರು
ಮಕ್ಕಳ ಉಚಿತ ಸಹಾಯವಾಣಿ ಸಂಖ್ಯೆ
1098 ಗೆ ಮಾಹಿತಿ ನೀಡಬಹುದು. ಮಾಹಿತಿ ಒದಗಿಸಿದವರ ಹೆಸರನ್ನು ಗುಪ್ತವಾಗಿ ಇಡಲಾಗುವದು ಎಂದು ಜಿ.ಪಂ
ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ಸತೀಶ.ಬಿ.ಸಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 