ಬಾಲ್ಯ ವಿವಾಹದ ಬಗ್ಗೆ ಎಚ್ಚರವಿರಲಿ: ನ್ಯಾ. ಚಂದ್ರಶೇಖರ ದಿಡ್ಡಿ
Be aware of child marriage: Justice Chandrashekar Diddi
ಮಹಾಲಿಂಗಪುರ 18: ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮದೇ ಆದ ಶಿಕ್ಷಣದ ಹಕ್ಕನ್ನು ಬಲಪಡಿಸಿಕೊಳ್ಳಬೇಕು. ಇತ್ತೀಚೆಗೆ ನಡೆಯುತ್ತಿರುವ ಬಾಲ್ಯ ವಿವಾಹದ ಬಗ್ಗೆ ಎಚ್ಚರ ವಹಿಸಬೇಕು. ಮಕ್ಕಳಿಗಾಗಿ ಸರ್ವೋಚ್ಚ ನ್ಯಾಯಾಲಯ ಆಶಾ ಎಂಬ ಯೋಜನೆ ಮಾಡಿ 15100 ಸಹಾಯವಾಣಿ ನೀಡಿದೆ. ಶಿಕ್ಷಣದ ಜಾಗೃತಿ ಪಡಿಸುವ ಕಾರ್ಯದಲ್ಲಿ ತೊಡಗಿ ಬಾಲಕಾರ್ಮಿಕರಿದ್ದರೆ ಕೂಡಲೇ ತಿಳಿಸಿ ಜೊತೆಗೆ ಸುತ್ತಮುತ್ತಲು ಅನೈತಿಕ ಚಟುವಟಿಕೆಗಳು ಕಂಡು ಬಂದರೆ ಸಮೀಪದ ಪೊಲೀಸ್ ಠಾಣೆಗೆ ಕರೆಮಾಡಿ ತಿಳಿಸಿ ಎಂದು ಹಿರಿಯ ನ್ಯಾಯಾಧೀಶ ಚಂದ್ರಶೇಖರ ದಿಡ್ಡಿ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾನೂನಿನ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಪ್ರಭಾರಿ ಪ್ರಾಚಾರ್ಯ ಎಸ್ ಎಲ್ ಜೋಡಟ್ಟಿ ಮಾತನಾಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹೇಶ ಜಿಡ್ಡಿಮನಿ, ಉಪಾಧ್ಯಕ್ಷ ವಿಜಯ ಸಭಕಾಳೆ, ಸದಸ್ಯರಾದ ಶೇಖರ ಮಗದುಮ, ಮಹಾಂತೇಶ ಪಾತ್ರೋಟ, ರವಿ ಗಿರಿಸಾಗರ ಉಪನ್ಯಾಸಕರಾದ ಸಿದ್ರಾಮ ಸವಸುದ್ದಿ, ರಾಜೇಶ್ವರಿ ತುಕಾನಟ್ಟಿ, ದೀಪಾ ಪಾಟೀಲ, ಶ್ವೇತಾ ಮರನಾಳ, ಪಾರ್ವತಿ ನುಚ್ಚಂಡಿ, ದಾನಮ್ಮ ಹಳ್ಳಿ, ವಿಶಾಲಾಕ್ಷಿ ನಾಯಕ ಸೇರಿದಂತೆ ವಿದ್ಯಾರ್ಥಿಗಳಿದ್ದರು. ಶಿಕ್ಷಕಿ ವಿನುತಾ ಕೊಳಕಿ ನಿರೂಪಿಸಿ, ವಂದಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 