ಬಾಲ್ಯ ವಿವಾಹದ ಬಗ್ಗೆ ಎಚ್ಚರವಿರಲಿ: ನ್ಯಾ. ಚಂದ್ರಶೇಖರ ದಿಡ್ಡಿ
Be aware of child marriage: Justice Chandrashekar Diddi
ಮಹಾಲಿಂಗಪುರ 18: ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮದೇ ಆದ ಶಿಕ್ಷಣದ ಹಕ್ಕನ್ನು ಬಲಪಡಿಸಿಕೊಳ್ಳಬೇಕು. ಇತ್ತೀಚೆಗೆ ನಡೆಯುತ್ತಿರುವ ಬಾಲ್ಯ ವಿವಾಹದ ಬಗ್ಗೆ ಎಚ್ಚರ ವಹಿಸಬೇಕು. ಮಕ್ಕಳಿಗಾಗಿ ಸರ್ವೋಚ್ಚ ನ್ಯಾಯಾಲಯ ಆಶಾ ಎಂಬ ಯೋಜನೆ ಮಾಡಿ 15100 ಸಹಾಯವಾಣಿ ನೀಡಿದೆ. ಶಿಕ್ಷಣದ ಜಾಗೃತಿ ಪಡಿಸುವ ಕಾರ್ಯದಲ್ಲಿ ತೊಡಗಿ ಬಾಲಕಾರ್ಮಿಕರಿದ್ದರೆ ಕೂಡಲೇ ತಿಳಿಸಿ ಜೊತೆಗೆ ಸುತ್ತಮುತ್ತಲು ಅನೈತಿಕ ಚಟುವಟಿಕೆಗಳು ಕಂಡು ಬಂದರೆ ಸಮೀಪದ ಪೊಲೀಸ್ ಠಾಣೆಗೆ ಕರೆಮಾಡಿ ತಿಳಿಸಿ ಎಂದು ಹಿರಿಯ ನ್ಯಾಯಾಧೀಶ ಚಂದ್ರಶೇಖರ ದಿಡ್ಡಿ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾನೂನಿನ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಪ್ರಭಾರಿ ಪ್ರಾಚಾರ್ಯ ಎಸ್ ಎಲ್ ಜೋಡಟ್ಟಿ ಮಾತನಾಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹೇಶ ಜಿಡ್ಡಿಮನಿ, ಉಪಾಧ್ಯಕ್ಷ ವಿಜಯ ಸಭಕಾಳೆ, ಸದಸ್ಯರಾದ ಶೇಖರ ಮಗದುಮ, ಮಹಾಂತೇಶ ಪಾತ್ರೋಟ, ರವಿ ಗಿರಿಸಾಗರ ಉಪನ್ಯಾಸಕರಾದ ಸಿದ್ರಾಮ ಸವಸುದ್ದಿ, ರಾಜೇಶ್ವರಿ ತುಕಾನಟ್ಟಿ, ದೀಪಾ ಪಾಟೀಲ, ಶ್ವೇತಾ ಮರನಾಳ, ಪಾರ್ವತಿ ನುಚ್ಚಂಡಿ, ದಾನಮ್ಮ ಹಳ್ಳಿ, ವಿಶಾಲಾಕ್ಷಿ ನಾಯಕ ಸೇರಿದಂತೆ ವಿದ್ಯಾರ್ಥಿಗಳಿದ್ದರು. ಶಿಕ್ಷಕಿ ವಿನುತಾ ಕೊಳಕಿ ನಿರೂಪಿಸಿ, ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 