ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರಿಕೆ ವಹಿಸಿ: ಡಿಹೆಚ್ಓ ಡಾ.ಯಲ್ಲಾ ರಮೇಶ್ ಬಾಬು
Be careful not to spread infectious diseases: DHO Dr. Yalla Ramesh Babu
ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರಿಕೆ ವಹಿಸಿ: ಡಿಹೆಚ್ಓ ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ 30 :ತುಂಗಭದ್ರಾ ನದಿಗೆ ಹೆಚ್ಚುವರಿ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಪ್ರವಾಹದ ನೀರು ಬ್ಯಾಕ್ಟೀರಿಯಾ, ವೈರಸ್ ಮತ್ತು ಇತರೆ ರೋಗಾಣುಗಳಿಂದ ಕಲುಷಿತಗೊಂಡಿರಬಹುದಾಗಿದ್ದು, ಸಾರ್ವಜನಿಕರು ಎಚ್ಚರವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದರು.
ಬುಧವಾರ ಕಂಪ್ಲಿ ಪಟ್ಟಣದ ಕೋಟೆ ಪ್ರದೇಶಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಾ, ನೀರಿನ ಹರಿಯುವ ಮಟ್ಟ ಹೆಚ್ಚಾಗಿ ಹಾವು ಚೇಳು ಇತರೆ ವಿಷ ಜಂತುಗಳು ಜನವಾಸ ಪ್ರದೇಶಕ್ಕೆ ಬರುವ ಸಂಭವವಿದೆ. ನೀರಿನ ಹರಿವಿನಿಂದ ಅಪಾಯ ಸಂಭವಿಸುವ ಸಂದರ್ಭದಲ್ಲಿ ಸುರಕ್ಷಿತೆಗಾಗಿ ಎತ್ತರದ ಪ್ರದೇಶಗಳಿಗೆ ಸ್ಥಳಾಂತರಗೊಳ್ಳಬೇಕು ಎಂದು ತಿಳಿಸಿದರು.
ಹಾವು ನಂಜು ನಿರೋಧಕ ಲಸಿಕೆ, ಓ.ಆರ್.ಎಸ್ ದ್ರಾವಣ, ನೆಗಡಿ ಕೆಮ್ಮು ಜ್ವರದ ಮಾತ್ರೆ, ಐ.ವಿ.ಫ್ಲೂಡ್, ಹ್ಯಾಲೋಜನ್ ಮಾತ್ರೆ, ಬ್ಲೀಚಿಂಗ್ ಪೌಡರ್ ಇತರೆ ಚಿಕಿತ್ಸಾ ಸೇವಾ ಸೌಲಭ್ಯಗಳು ಸಾಕಷ್ಟು ಪ್ರಮಾಣದಲ್ಲಿ ಮುಂಚೂಣಿಯಾಗಿ ಸಂಗ್ರಹಿಸಿ ಎಚ್ಚರಿಕೆ ವಹಿಸಲಾಗಿದೆ ಎಂದರು.
ಸಮುದಾಯದಲ್ಲಿ ಗೃಹ ಆರೋಗ್ಯ ಕಾರ್ಯಕ್ರಮ, ಗರ್ಭಿಣಿ, ಗಂಡಾಂತರ ಗರ್ಭಿಣಿಯರ ಕಾಳಜಿ, ಸುಸೂತ್ರ ಹೆರಿಗೆ ಸೌಲಭ್ಯ, ತಾಯಿ ಮಗುವಿನ ಆರೈಕೆ ಕುರಿತಂತೆ ಆರೋಗ್ಯ ಪರ ಕ್ರಮಗಳನ್ನು ಅನುಸರಿಸಬೇಕು. ಅಪಾಯಕಾರಿ ಪ್ರದೇಶಗಳಲ್ಲಿನ ಜನಾರೋಗ್ಯ ಸಮೀಕ್ಷೆ ಪ್ರತಿದಿನ ನಡೆಸಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಸಿಬ್ಬಂದಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ದಿಶಾ ಸಮಿತಿಯ ಸದಸ್ಯ ಎ.ಸಿ.ದಾನಪ್ಪ, ಆರೋಗ್ಯ ಮೇಲ್ವಿಚಾರಕ ಟಿ.ವಿರೂಪಾಕ್ಷಪ್ಪ, ತಾಲ್ಲೂಕ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಬಸವರಾಜ್ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 