ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಬಾಗಿಲಿಗೆ ಅಗತ್ಯ ವಸ್ತುಗಳ ಪೂರೈಕೆ ಆರಂಭ
ಬೆಂಗಳೂರು, ಏ 12 ,ಲಾಕ್ ಡೌನ್ ಅವಧಿಯಲ್ಲಿ ಜನರು ಮನೆಗಳಿಂದ ಹೊರಗೆ ಬಾರದಂತೆ ತಡೆಯುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಯೋಜನೆ ಆರಂಭಿಸಲಾಗಿದೆ. ಬಸವನಗುಡಿ, ಜಯನಗರ, ಪದ್ಮನಾಭನಗರ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳ ಸಹಾಯವಾಣಿಗೆ ಕಂದಾಯ ಸಚಿವ ಆರ್. ಅಶೋಕ್ ಈ ಕುರಿತ ಸಹಾಯವಾಣಿಗೆ ಚಾಲನೆ ನೀಡಿದರು.
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಆರ್. ಅಶೋಕ್, ಲಾಕ್ ಡೌನ್ ಸಂದರ್ಭದಲ್ಲಿ ಮನೆಯಲ್ಲಿರುವಂತೆ ಸೂಚಿಸಿದ್ದರೂ ಸಹ ಕಾಲ್ನಡಿಗೆಯಲ್ಲಿ ಮತ್ತು ವಾಹನಗಳಲ್ಲಿ ಜನ ಸಂಚರಿಸುವುದನ್ನು ತಪ್ಪಿಸುವುದು ಕಷ್ಟ ಸಾಧ್ಯವಾಗಿದೆ. ಈ ಕುರಿತು ಪೊಲೀಸರು ಪ್ರಶ್ನಿಸಿದಾಗ ಅಗತ್ಯ ವಸ್ತು ಖರೀದಿಸಲು ಹೊರಬಂದಿರುವುದಾಗಿ ಉತ್ತರಿಸುತ್ತಿದ್ದಾರೆ. ಕೊರೊನಾ ಸೋಂಕು ಹರಡದಂತೆ ಎಚ್ಚರವಹಿಸಲು ಜನಜಂಗುಳಿಯನ್ನು ಕಡಿಮೆ ಮಾಡುವುದೊಂದೇ ಸದ್ಯದ ಉಪಾಯವಾಗಿರುವ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳನ್ನು ಜನರಿಗೆ ಮನೆ ಬಾಗಿಲಲ್ಲೇ ತಲುಪಿಸುವ ಮೂಲಕ ಅವರು, ಹೊರಗೆ ಬರದಂತೆ ನೋಡಿಕೊಳ್ಳಬೇಕಾಗಿದೆ ಎಂದರು. ಈ ಉದ್ದೇಶದಿಂದಲೇ ದಿನಬಳಕೆಯ ಅಗತ್ಯ ವಸ್ತುಗಳು, ದಿನಸಿ, ತರಕಾರಿ, ಔಷಧಿ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಿಸುವ ಹೋಮ್ ಡಿಲವರಿ ಸಹಾಯವಾಣಿ ಸೇವೆಯನ್ನು ಬೆಂಗಳೂರು ದಕ್ಷಿಣ ಪೊಲೀಸ್ ಇಲಾಖೆಯ ವ್ಯಾಪ್ತಿಯಲ್ಲಿ ಈ ಸೇವೆ ಲಭ್ಯವಿದೆ. ಒಂದು ಕುಟುಂಬ ವಾರಕ್ಕೆ ಎರಡು ಬಾರಿ ಈ ಸೇವೆಯನ್ನು ಪಡೆಯಬಹುದು. ೦೮೦-೬೧೯೧ ೪೯೬೦ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ಅಥವಾ ಇದೇ ಸಂಖ್ಯೆಗೆ ವಾಟ್ಸಾಪ್ ಮೂಲಕ ಮನವಿ ಕಳುಹಿಸಿ ಸೇವೆ ಪಡೆಯಬಹುದಾಗಿದೆ ಎಂದರು.ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಈಗ ಹೇಳಿದ ನಾಲ್ಕು ಬಡಾವಣೆಗಳ ಎರಡೂವರೆ ಲಕ್ಷ ಮನೆಗಳ ಏಳೂವರೆ ಲಕ್ಷ ಜನರಿಗೆ ಸುಮಾರು ೨ ಸಾವಿರ ಅಂಗಡಿಗಳ ಮೂಲಕ ಅಗತ್ಯ ವಸ್ತುಗಳನ್ನು ಮನೆಬಾಗಿಲಿಗೆ ತಲುಪಿಸಲಾಗುವುದು ಎಂದು ತಿಳಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 