ಬಳ್ಳಾರಿ: ಬೆಳಗಾವಿಯಿಂದ ಬೆಂಗಳೂರುರವರೆಗೆ ಐತಿಹಾಸಿಕ ಪ್ರತಿಭಟನಾ ರ್ಯಾಲಿ
ಲೋಕದರ್ಶನ ವರದಿ
ಬಳ್ಳಾರಿ 11: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಯಾದ, ಮಹಾದಾಯಿ ಯೋಜನೆಯನ್ನು ಜಾರಿಗೊಳಿಸದೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹುಸಿ ಭರವಸೆ ನೀಡಿ ಮೋಸ ಮಾಡುತ್ತಾ ಬಂದಿವೆ.
ಇಡೀ ರಾಜ್ಯದ ಅನ್ನದಾತ ರೈತರಿಗೆ ಸಮಸ್ತ ಕರ್ನಾಟಕದ ಜನತೆಗೆ ಮಾಡಿದ ಅಕ್ಷಮ್ಯ ಅಪರಾಧವಾಗಿದೆ. ಕಡೆಗೆ ಉತ್ತರ ಕರ್ನಾಟಕದಲ್ಲಿ ನೆರೆ ಪ್ರವಾಹವುಂಟಾಗಿ ಲಕ್ಷಾಂತರ ಜನರು ನೆಲೆ-ಜೀವನ ಕಳೆದುಕೊಂಡು ಬೀದಿಪಾಲಾಗಿದ್ದಾರೆ.
ಅಂತಹ ಸಂತ್ರಸ್ತ ಜನರಿಗೆ ಸೂಕ್ತ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ" ಎಂದು ಕರ್ನಾಟಕ ಪ್ರಜಾಶಕ್ತಿ ಸಮಿತಿಯ ಬಳ್ಳಾರಿ ಜಿಲ್ಲಾ ಘಟಕಕ್ಕೆ ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷ ಬಿ.ಕೆ.ಚಂದ್ರಶೇಖರ್ ನೊಂದು ನುಡಿದರು. ಇದೇ ತಿಂಗಳು ಫೆಬ್ರುವರಿ 15ನೇ ತಾರೀಖಿನಂದು ನಮ್ಮ ಸಮಿತಿಯ ರಾಜ್ಯಾಧ್ಯಕ್ಷ ಡಾ.ವಿಶ್ವನಾಥ.ಜಿ.ಪಿ. ನಾಯಕತ್ವದಲ್ಲಿ ಬೆಳಗಾವಿಯಿಂದ ಬೆಂಗಳೂರುರವರೆಗೆ ಬೃಹತ್ ಐತಿಹಾಸಿಕ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಕರ್ಣಟಕ ರಾಜ್ಯದ ಕನ್ನಡಪರ ಸಂಘಟನೆಗಳು ವಿವಿಧ ಮಠಾಧೀಶರು-ಖ್ಯಾತ ಚಲನಚಿತ್ರ ನಟರು-ರೈತ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸೇರಿದಂತೆ ಒಂದು ಲಕ್ಷಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ. "ರ್ಯಾಲಿಯ ಯಶಸ್ವಿಗೆ ಆದಿದೇವತೆ-ಶ್ರೀ ಕನಕದುರ್ಗಮ್ಮಗೆ ಹರಕೆ" ಹೊತ್ತ ನಮ್ಮ ಕರ್ನಾಟಕ ಪ್ರಜಾಶಕ್ತಿ ಸಮಿತಿಯ ರಾಜ್ಯಾಧ್ಯಕ್ಷರಾದ ಡಾಜಿ.ಪಿ.ವಿಶ್ವನಾಥ್ ನಾಯಕತ್ವದಲ್ಲಿ ನಡೆಯುವ ಐತಿಹಾಸಿಕ ಪ್ರತಿಭಟನಾ ರ್ಯಾಲಿಯು ಯಶಸ್ವಿಯಾಗಲೆಂದು ನಂತರ ಬಳ್ಳಾರಿಯಿಂದ ಪ್ರತಿಭಟನಾ ರ್ಯಾಲಿಗೆ ಸಹಸ್ರಾರು ಸಂಖ್ಯೆಯ ಸಾರ್ವಜನಿಕರನ್ನು ಕರೆದುಕೊಂಡು ರ್ಯಾಲಿಯಲ್ಲಿ ಪಾಲ್ಗೊಳ್ಳಲಾಗುವುದಾಗಿ ಎಂದು ತಿಳಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 