ಬಳ್ಳಾರಿ: ಬೆಸ್ಟ್ ಎಂಪ್ಲಾಯ್ ಪ್ರಶಸ್ತಿ
ಬಳ್ಳಾರಿ 14: ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಳೆದ ಆಗಸ್ಟ್ ತಿಂಗಳಿಂದ ಇ- ಆಫೀಸ್ ಅನುಷ್ಠಾನಗೊಂಡಿದ್ದು, ಕಡತಗಳು ವಿಳಂಬಕ್ಕೆ ಅಸ್ಪದವಿಲ್ಲದೇ ಶೀಘ್ರವಾಗಿ ವಿಲೇವಾರಿಯಾಗುತ್ತಿವೆ.
ಕಡತಗಳ ಶೀಘ್ರ ವಿಲೇವಾರಿ ಮಾಡುವುದರ ಮೂಲಕ ಜನರಿಗೆ ಸಕಾಲದಲ್ಲಿ ಸ್ಪಂದಿಸುವ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಾಗಿಯೇ ಜಿಲ್ಲಾಧಿಕಾರಿನಕುಲ್ ಬೆಸ್ಟ್ ಎಂಪ್ಲಾಯ್ ಪ್ರಶಸ್ತಿ ಸ್ಥಾಪಿಸಿದ್ದು, ಪ್ರತಿ ತಿಂಗಳು ತಮ್ಮ ವ್ಯಾಪ್ತಿಗೆ ಬರುವ ಅರ್ಜಿಗಳು, ನಿಗದಿಪಡಿಸಿದ ಅವಧಿಯೊಳಗೆ ಕಡತಗಳ ವಿಲೇವಾರಿ ಮೂಲಕ ಸ್ಪಂದನೆ, ಇ-ಹಾಜರಾತಿಯ ಪ್ರಗತಿಯನ್ನು ಪರಿಶೀಲಿಸಿ ಮೂರು ಜನರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ.
ಸೆಪ್ಟೆಂಬರ್ ತಿಂಗಳ ಪ್ರಶಸ್ತಿಗೆ ಡಿಸಿ ಕಚೇರಿಯ ಕೆ.ಸುಧಾ, ಮಂಜುಳಾ ನಂದಿಕೋಲಮಠ, ಎಂ.ಹಸೀನಾಬಾನು ಅವರು ಆಯ್ಕೆಯಾಗಿದ್ದು, ಆಯ್ಕೆಯಾದವರಿಗೆ ಜಿಲ್ಲಾಧಿಕಾರಿ ನಕುಲ್ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಿಸಿ ಶುಭಹಾರೈಸಿದರು.
ಪ್ರಶಸ್ತಿ ವಿತರಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ಡಿಸಿ ಕಚೇರಿಯ ಎಲ್ಲ ಸಿಬ್ಬಂದಿ ಜನಸ್ನೇಹಿಯಾಗಿ ಕೆಲಸ ಮಾಡಬೇಕು, ಕಚೇರಿಗೆ ಸಮಸ್ಯೆ ಹೊತ್ತು ಬರುವವರೆಗೆ ಸಕಾಲದಲ್ಲಿ ಸ್ಪಂದಿಸಿ ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಇದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 