ಬಳ್ಳಾರಿ: ಬೆಳೆಗಳ ಬೆಲೆ ಸಮಸ್ಯೆ: ಸಕರ್ಾರಕ್ಕೆ ಶಿಫಾರಸ್ಸು
ಬಳ್ಳಾರಿ 19: ರೈತರ ಬೆಳೆಗಳ ಬೆಲೆ ಹಾಗೂ ಬೆಲೆ ಸಮಸ್ಯೆಗೆ ಸಂಬಂಧಿಸಿದಂತೆ ಕೃಷಿ ಬೆಲೆ ಆಯೋಗದಿಂದ ಸಕರ್ಾರಕ್ಕೆ ಶಿಫಾರಸ್ಸು ಮಾಡಲಾಗುವುದು ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕೃಷಿ, ತೋಟಗಾರಿಕೆ ಬೆಳೆಗಳ ಮಾರುಕಟ್ಟೆ, ಖರೀದಿ ಮತ್ತು ಬೆಲೆಗಳ ಕುರಿತ ವಿಚಾರ ತಜ್ಞರು, ರೈತ ಮುಖಂಡರು ಹಾಗೂ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದರು.
ವಿವಿಧ ಬೆಳೆಗಳ ಬೆಲೆಗೆ ಸಂಬಂಧಿಸಿದಂತೆ ಆಯೋಗ ಅಂತಿಮ ನಿರ್ಧಾರ ಕೈಗೊಳ್ಳಲು ಬರುವುದಿಲ್ಲ ಎಂದು ವಿವರಿಸಿದ ಅಧ್ಯಕ್ಷ ಹನುಮನಗೌಡ ಅವರು ಬೆಂಬಲ ಬೆಲೆ ಘೋಷಿಸಿದ ನಂತರ ರೈತರು ಮಾರುಕಟ್ಟೆಗೆ ಬರುವುದು ತುಂಬಾ ವಿರಳವಾಗಿದೆ. ಹಾಗಾಗೀ ನಮ್ಮ ಕೃಷಿ ಬೆಲೆ ಆಯೋಗದಿಂದ ರೈತರು ಬೆಳೆದ ಬೆಳೆಯನ್ನು ರೈತನ ಮನೆಯಿಂದ ನೇರವಾಗಿ ಖರೀದಿಸಿ ಅದನ್ನು ಎ.ಪಿ.ಎಂ.ಸಿ ಮಾರುಕಟ್ಟೆ ತರುವ ವ್ಯವಸ್ಥೆಯನ್ನು ಹಾಕಿಕೊಳ್ಳಲಾಗಿದ್ದು, ಈ ಶಿಫಾರಸ್ಸನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ರೈತಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 