ಬಳ್ಳಾರಿ: ಸರ್ಕಾರಿ ಜಮೀನು ಅತಿಕ್ರಮಣ ತೆರವಿಗೆ ಜಿಲ್ಲಾಡಳಿತದಿಂದ ಕಾರ್ಯಪಡೆ ರಚನೆ
Bellary: District administration forms task force to clear encroachment on government land
ಬಳ್ಳಾರಿ 07: ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಸರ್ಕಾರದ ಹೆಸರಿನಲ್ಲಿರುವ, ಸರ್ಕಾರಿ- ಸಂಘ ಸಂಸ್ಥೆಗಳಿಗೆ ಮಂಜೂರಾದ, ವಿವಿಧ ಉದ್ದೇಶಗಳಿಗೆ ಭೂಸ್ವಾಧೀನವಾದ, ವಿವಿಧ ಮಂಡಳಿಗಳ ಹೆಸರಿನಲ್ಲಿರುವ ಸರ್ಕಾರಿ ಜಮೀನುಗಳನ್ನು ಅನಧಿಕೃತವಾಗಿ ಒತ್ತುವರಿ ಮಾಡಿ, ಅಕ್ರಮವಾಗಿ ನೋಂದಾಣಿ ಮಾಡಿಕೊಂಡು ಜಮೀನು, ನಿವೇಶನಗಳನ್ನು ಮಾರಾಟ ಮಾಡುವುದನ್ನು ತಡೆಯಲು ಹಾಗೂ ಸರ್ಕಾರಿ ಜಮೀನು, ನಿವೇಶನಗಳನ್ನು ಸಂರಕ್ಷಿಸಲು, ಅನಧಿಕೃತವಾಗಿ ಒತ್ತುವರಿ ಮಾಡಿರುವ ಪ್ರಕರಣಗಳನ್ನು ಗುರುತಿಸಿ, ಒತ್ತುವರಿ ಮಾಡಿರುವವರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಂಡು, ಅನಧಿಕೃತ ಒತ್ತುವರಿಯನ್ನು ತೆರವುಗೊಳಿಸಲು ವಿಶೇಷ ಕಾರ್ಯಪಡೆ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
*ಸಮಿತಿ ರಚನೆ:*
ಈ ಉನ್ನತ ಮಟ್ಟದ ಕಾರ್ಯಪಡೆಯಲ್ಲಿ ಈ ಕೆಳಗಿನ ಅಧಿಕಾರಿಗಳಿರುತ್ತಾರೆ. ಅಧ್ಯಕ್ಷರಾಗಿ ಅಪರ ಜಿಲ್ಲಾಧಿಕಾರಿಗಳು. ಸದಸ್ಯರಾಗಿ ಮಹಾನಗರ ಪಾಲಿಕೆ ಆಯುಕ್ತರು, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ಬಳ್ಳಾರಿ ನಗರ ಮತ್ತು ಬಳ್ಳಾರಿ ಗ್ರಾಮೀಣ ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕರು, ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂ ದಾಖಲೆಗಳ ಉಪ ನಿರ್ದೇಶಕರು, ಭೂ ದಾಖಲೆಗಳ ಸಹಾಯಕ ನಿರ್ದೇಶಕರು (ನಗರ ಮತ್ತು ಗ್ರಾಮೀಣ) ಹಾಗೂ ಸಹಾಯಕ ಆಯುಕ್ತರು ಮತ್ತು ಸದಸ್ಯ ಕಾರ್ಯದರ್ಶಿಯಾಗಿ ಬಳ್ಳಾರಿ ತಹಶೀಲ್ದಾರ್ ಇರುತ್ತಾರೆ.
*ಕಾರ್ಯಪಡೆಯ ಕಾರ್ಯ ನಿರ್ವಹಣೆ:*
ಪ್ರಥಮ ಹಂತದಲ್ಲಿ ಬಳ್ಳಾರಿ ನಗರದಲ್ಲಿ ಸರ್ಕಾರದ ಹೆಸರಿನಲ್ಲಿರುವ ಜಮೀನುಗಳು ವಿವಿಧ ಸರ್ಕಾರಿ, ಸಂಘ ಸಂಸ್ಥೆಗಳಿಗೆ ಮಂಜೂರಾದ, ವಿವಿಧ ಉದ್ದೇಶಗಳಿಗೆ ಭೂಸ್ವಾಧೀನವಾದ, ವಿವಿಧ ಮಂಡಳಿಗಳ ಹೆಸರಿನಲ್ಲಿರುವ, ಸರ್ಕಾರದ ಇಲಾಖೆಗಳಿಗೆ ವರ್ಗಾವಣೆಯಾಗಿರುವ, ವಿವಿಧ ಇಲಾಖೆ ಹೆಸರಿನಲ್ಲಿರುವ ಜಮೀನು, ನಿವೇಶನಗಳ ಪಟ್ಟಿ ತಯಾರಿಸುವುದು.
ತಹಸೀಲ್ದಾರರು, ಉಪ ಆಯುಕ್ತರು (ಕಂದಾಯ) ನಗರ ಪಾಲಿಕೆ ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಬಳ್ಳಾರಿ (ನಗರ ಮತ್ತು ಗ್ರಾಮೀಣ) ಇವರುಗಳು ಸರ್ವೇಯರ್, ಕಂದಾಯ ನೀರೀಕ್ಷಕರು ಮತ್ತು ಗ್ರಾಮ ಆಡಳಿತಾಧಿಕಾರಿಗಳ ಮೂಲಕ ಅಂತಹ ಎಲ್ಲಾ ಜಮೀನುಗಳನ್ನು ಸ್ಥಳಾ ತನಿಖೆ ನಡೆಸುವುದು. ಒತ್ತುವರಿಯಾಗಿದೆ ಎಂದು ಕಂಡುಬಂದಲ್ಲಿ (ನಗರ ಮತ್ತು ಗ್ರಾಮೀಣ) ಸರ್ವೇಯರ್ ಯಿಂದ ಆದ್ಯತೆ ಮೇರೆಗೆ ಅಳತೆ ಮಾಡಿಸಿ, ಒತ್ತುವರಿಯನ್ನು ನಕ್ಷೆ ಸಮೇತ ಗುರುತಿಸುವುದು.
ಒತ್ತುವರಿ ಸ್ಥಿರಪಟ್ಟಲ್ಲಿ ಕೂಡಲೇ ಮೇಲಿನ ಸಮಿತಿಗೆ ವರದಿಯನ್ನು ಸಲ್ಲಿಸಿ, ಕರ್ನಾಟಕ ಭೂ ಕಂದಾಯ ಕಾಯ್ದೆ ಕಲಂ 104 ಮತ್ತು 192ಎ ರಡಿಯಲ್ಲಿ ಕೂಡಲೇ ಒತ್ತುವರಿಯನ್ನು ನಿಯಮಾನುಸಾರ ತೆರವುಗೊಳಿಸಲು ತಹಸೀಲ್ದಾರರು ಕ್ರಮ ಜರುಗಿಸುವುದು.
ಮೇಲಿನ ಸಮಿತಿಯು ಒತ್ತುವರಿ ತೆರವುಗೊಳಿಸಲು ಕಾಲಮಿತಿ ನಿಗಧಿಪಡಿಸಿ, ಪ್ರತಿ ತಿಂಗಳಿಗೊಮ್ಮೆ ಸಮಿತಿ ಸಭೆಯನ್ನು ಕರೆದು ಒತ್ತುವರಿಗೊಳಿಸುವಲ್ಲಿ ಸಾಧಿಸಿರುವ ಪ್ರಗತಿ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸಭೆಯ ನಡವಳಿಗನ್ನು ಸಲ್ಲಿಸುವುದು. ಗುರುತರವಾದ ಪ್ರಕರಣವಿದ್ದಲ್ಲಿ ಕೂಡಲೇ ವರದಿಯನ್ನು ಮಾಡತಕ್ಕದ್ದು. ಮೇಲಿನಂತೆ ಕ್ರಮ ಜರುಗಿಸಿ ಪ್ರತಿ ತಿಂಗಳು ಜಿಲ್ಲಾಧಿಕಾರಿಯವರಿಗೆ ವರದಿ ಸಲ್ಲಿಸಲು ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 