ಬಳ್ಳಾರಿ; ತುಂಗಭದ್ರಾ ತೀರದಲ್ಲಿ ಮತ್ತೆ ಪ್ರವಾಹ ಭೀತಿ
ಲೋಕದರ್ಶನ ವರದಿ
ಬಳ್ಳಾರಿ 05: ತುಂಗಭದ್ರಾ ನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಮಲೆನಾಡಿನಲ್ಲಿ ಉತ್ತಮ ಮಳೆಯಿಂದಾಗಿ ಅಣೆಕಟ್ಟೆ ಒಳಹರಿವಿನಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.
ಗುರುವಾರ ಅಣೆಕಟ್ಟೆಗೆ 39142 ಕ್ಯೂಸೆಕ್ ಒಳಹರಿವಿತ್ತು. ತುಂಗಾ ಜಲಾಶಯದಿಂದ 37339 ಹಾಗೂ ಭದ್ರಾ ಅಣೆಕಟ್ಟೆಯಿಂದ 11868 ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ಇದರಿಂದಾಗಿ ಯಾವುದೇ ಸಂದರ್ಭದಲ್ಲಿ ತುಂಗಭದ್ರಾ ಅಣೆಕಟ್ಟೆ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುವ ನಿರೀಕ್ಷೆಗಳಿವೆ.
ಅಣೆಕಟ್ಟೆಯಿಂದ ಗುರುವಾರ ಬೆಳಗ್ಗೆ 8ಕ್ಕೆ 12 ಗೇಟ್ಗಳ ಮೂಲಕ 36408 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಯಿತು. ಬೆಳಗ್ಗೆ 10ಕ್ಕೆ 20 ಗೇಟ್ಗಳ ಮೂಲಕ ನದಿಗೆ 45710 ಕ್ಯೂಸೆಕ್ ನೀರು ಹರಿಸಲಾಯಿತು.
ತುಂಗಾ, ಭದ್ರಾ ಹಾಗೂ ವರದಾ ನದಿ ಪಾತ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣ ಆಧರಿಸಿ ನದಿಗೆ 50 ಸಾವಿರದಿಂದ ಒಂದು ಲಕ್ಷ ಕ್ಯೂಸೆಕ್ ನೀರು ಬಿಡುವ ಸಾಧ್ಯತೆಗಳಿವೆ. ಇದರಿಂದಾಗಿ ಅಣೆಕಟ್ಟೆ ಕೆಳಭಾಗದ ನದಿಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಬೇಕೆಂದು ತುಂಗಭದ್ರಾ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 