ಬಳ್ಳಾರಿ: ಉಚಿತ ಅರೋಗ್ಯ ತಪಾಸಣೆ ಶಿಬಿರ
ಬಳ್ಳಾರಿ ಪೆ.21:ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಳ್ಳಾರಿ ಶಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಇಲಾಖೆ ಇವರ ವತಿಯಿಂದ "ಭಾರತೀಯ ರೆಡ್ ಕ್ರಾಸ್ ಸಂಸ್ತೆಯ 1920 ರಿಂದ 2020ರ ಶತಮಾನೋತ್ಸವ" ಪ್ರಯುಕ್ತ ಉತ್ತಮ ಆರೋಗ್ಯದ ನಿಮಿತ್ತ ಶಾಂತಿಧಾಮ, ಕಂಟೋನ್ಮೆಂಟ್, ಬಳ್ಳಾರಿಯಲ್ಲಿ "ಉಚಿತ ಅರೋಗ್ಯ ತಪಾಸಣೆ" ಶಿಬಿರವನ್ನು ನಡೆಸಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ.ನಾಗರಾಜ್ ರಾವ್, ಉಪ ಸಭಾಪತಿ, ಆರೋಗ್ಯ ಉಪ ಸಮಿತಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಳ್ಳಾರಿ ಇವರು ಶಾಂತಿಧಾಮದಲ್ಲಿ ಇರುವ ಮಕ್ಕಳಿಗೆ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಿದರು. ಇವರು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಳಾಜಿ ವಹಿಸಿ ಶಾಂತಿಧಾಮದಲ್ಲಿ ಪ್ರತಿ ತಿಂಗಳು ಆರೋಗ್ಯ ತಪಾಸಣೆ ಶಿಬಿರವನ್ನು ನಡೆಸಬೇಕೆಂದು ಸಲಹೆ ನೀಡಿದರು. ಈ ಕಾರ್ಯಕ್ರಮದಲ್ಲಿ ಚಾಂದ್ ಬಾಷಾ, ಬಳ್ಳಾರಿ ಇವರ ಮಾತನಾಡುತ್ತ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಲಾಜಿ ವಹಿಸಲು ಸಲಹೆ ನೀಡಿದ್ದಕ್ಕೆ ಧನ್ಯವಾದಗಳನ್ನು ತಿಳಿಸುತ್ತ ಇದೇ ರೀತಿ ಮುಂದಿನ ದಿನಗಳಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಆರೋಗ್ಯ ತಪಾಸಣೆ ಶಿಬಿರವನ್ನು ನಡೆಸಲು ಕೋರಿದ್ದರು. ಇದೇ ಸಂದರ್ಭದಲ್ಲಿ ಎಂ.ಎ.ಷಕೀಬ್, ಕಾರ್ಯದಶರ್ಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಮಂಜುನಾಥ್, ಕಛೇರಿ ಸಿಬ್ಬಂದಿ, ರೆಡ್ ಕ್ರಾಸ್ ಸಂಸ್ಥೆ ಇವರು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 