ಬಳ್ಳಾರಿ: ಭಾರೀ ಮಳೆ: ಮನೆಗೆ ನುಗ್ಗಿದ ನೀರು ಜನಜೀವನ ಅಸ್ತವ್ಯಸ್ಥ
ಲೋಕದರ್ಶನ ವರದಿ
ಬಳ್ಳಾರಿ 28: ಸ್ಥಳೀಯ ಕೌಲ್ಬಜಾರ್ ಪ್ರದೇಶದ ಬಂಡಿಹಟ್ಟಿ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮಳೆಯ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿರುವ ಘಟನೆ ಶನಿವಾರಂದು ಜರುಗಿದೆ.
ಬೆಳಗಿನ ಜಾವ ಸುರಿದ ಭಾರೀ ಮಳೆಯಿಂದ ಬಂಡಿಹಟ್ಟಿ ಪಕ್ಕದಲ್ಲಿ ಹರಿಯುತ್ತಿರುವ ದೊಡ್ಡ ಹಳ್ಳದ ನೀರು ಡಾಲರ್ಸ್ ಕಾಲೋನಿ, ಈಡಿಗರ ಓಣಿ, ಸೇರಿದಂತೆ ವಿವಿಧ ಜನವಸತಿ ಪ್ರದೇಶಗಳಿಗೆ ನುಗ್ಗಿದೆ. ಇದರಿಂದ ಮನೆಗಳಲ್ಲಿ ನೀರು ಸಂಗ್ರಹಗೊಂಡು ಬಡಜನರ ಆಹಾರ, ಬಟ್ಟೆ, ಪಾತ್ರ ಪಗಡಗಳು, ಎತ್ತಿನ ಬಂಡಿ, ಓಮಿನಿ ಕಾರು ಕೊಚ್ಚಿಹೋಗಿವೆ. ಅಲ್ಲದೆ ಕಾಸೀಮ್ ಎಂಬುವವರ ಮನೆಯು ಕುಸಿದು ಬಿದ್ದಿದೆ. ಇದರಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಸ್ಥಳಕ್ಕೆ ಭೇಟಿ ನೀಡಿದ ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಅವರು ಮಳೆಯಿಂದ ಹಾನಿಗೀಡಾದ ಜನರಿಗೆ ಸಮಾಧಾನ ಹೇಳಿ ಪರಿಸ್ಥಿತಿಯನ್ನು ಅವಲೋಕಿಸಿ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಪರಿಹಾರ ನೀಡುವ ಭರವಸೆಯನ್ನು ನೀಡಿದರು.
ಸಂದರ್ಭದಲ್ಲಿ ಬಂಡಿಹಟ್ಟಿಯ ಕಾಂಗ್ರೆಸ್ ಮುಖಂಡರಾದ ಕೆ.ಸತೀಶ್, ಬಿಸೋಮು, ಕೆ.ವೆಂಕೋಬ, ಎ.ಡಿ.ಸಬೆಸ್ಟೀನ್, ಶಿವಶರಣ, ವೀರೇಶ್ ಮುಂತಾದವರು ಹಾಜರಿದ್ದು ಪರಿಸ್ಥಿತಿಯನ್ನು ವಿವರಿಸಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 