ಬಳ್ಳಾರಿ: ಅಂತರ್ ಜಿಲ್ಲಾ ರೂಲರ್ ಸ್ಕೇಟಿಂಗ್ ಪಂದ್ಯಾವಳಿ
ಲೋಕದರ್ಶನ ವರದಿ
ಬಳ್ಳಾರಿ 18: ನಗರದ ಸತ್ಯಂ ಇಂಟರ್ ನ್ಯಾಷನಲ್ ಸ್ಕೂಲ್ ಮತ್ತು ಕಾಲೇಜು ಆವರಣದಲ್ಲಿ ದಿ 3ನೇ ಅಂತರ್ ಜಿಲ್ಲಾ ರೂಲರ್ ಸ್ಕೇಟಿಂಗ್ ಪಂಧ್ಯಾವಳಿಯನ್ನು ಏಕಲವ್ಯ ರೂಲರ್ ಸ್ಕೇಟಿಂಗ್ ಅಕಾಡಮಿ ವತಿಯಿಂದ ಹಮ್ಮಿಕೊಳ್ಳಲಾಗಿತ್ತು ಈ ಪಂದ್ಯಾವಳಿಗೆ ವಿವಿಧ ಜಿಲ್ಲೆಗಳಾದ ಕಲ್ಬುಗರ್ಿ, ಕೊಪ್ಪಳ, ಗದಗ, ಹುಬ್ಬಳ್ಳಿ, ಬೀದರ್, ಬಳ್ಳಾರಿಯಿಂದ ಸುಮಾರು 150 ಕ್ಕೂ ಹೆಚ್ಚು ರೂಲರ್ ಸ್ಕೇಟಿಂಗ್ ಕ್ರೀಡಾಪಟುಗಳು ಭಾಗವಹಿಸಿದ್ದರು.
ಸ್ಕೇಟಿಂಗ್ ಅಕಾಡಮಿ ಅಧ್ಯಕ್ಷರಾದ ಶ್ರೀ.ಆನಂದ್ ಪೋಲಾ ರವರು ಉದ್ಘಾಟಿಸಿ ಮಾತನಾಡಿ ಇಂತಹ ಕ್ರೀಡಾ ಚಟುವಟಿಕೆಗಲು ನಮ್ಮ ಹಿಂದುಳಿದ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವುದು ಬಹಳ ಸಂತೋಷವಾಗುತ್ತಿದೆ. ಅದಕ್ಕೆ ಜಿಲ್ಲಾಡಳಿತ ನಮ್ಮ ಅಕಾಡಮಿಗೆ ಸುಸಜ್ಜಿತ ಸ್ಕೇಟಿಂಗ್ ಮೈದಾನವನ್ನ ಆದಷ್ಟು ಬೇಗನೆ ಜಿಲ್ಲಾ ಕ್ರೀಡಾಂಗದಲ್ಲಿ ವ್ಯವಸ್ಥೆ ಮಾಡಿಕೊಡಬೇಕಾಗಿ ವಿನಂತಿಸಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಹರಿಶಂಕರ್ ಅಗರ್ ವಾಲ್ ಸತ್ಯಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಜಗದೀಶ್ ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ರಾಮಾಂಜಿನೇಯಲು ಬಂಡಿಹಟ್ಟಿ ಮಹೇಶ್, ರಾಜು, ಶೇಖರ್, ಬಳ್ಳಾರಿ ಜಿಲ್ಲಾ ರೂಲರ್ ಸ್ಕೇಟಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ಚಂದ್ರಶೇಖರ್ಗೌಡ, ಕಾರ್ಯದಶರ್ಿಗಳಾದ ಚಂದ್ರಶೇಖರ್, ಸುಭಾಷ್ ಚಂದ್ರ, ಉಪಸ್ಥಿತರಿದ್ದರು, ಪ್ರಾಸ್ತಾವಿಕವಾಗಿ ಆಯೋಜಕರು ಹಾಗೂ ಸ್ಕೇಟಿಂಗ್ ಅಕಾಡಮಿಯ ಕಾರ್ಯದರ್ಶಿಗಳಾದ ಕಟ್ಟೇಸ್ವಾಮಿ ಮಾತನಾಡಿದರು, ಶಿವಶಂಕರಯ್ಯ ನಿರೂಪಣೆಯನ್ನು ನಡೆಸಿಕೊಟ್ಟರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 