ಬಳ್ಳಾರಿ: ಕುವೆಂಪು ಜನ್ಮದಿನ: ಭಾವಗೀತೆಗಳ ಗಾಯನ
ಲೋಕದರ್ಶನ ವರದಿ
ಬಳ್ಳಾರಿ 29: ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆಯ ಅಂಗವಾಗಿ ಸ್ಥಳೀಯ ಪೊಲೀಸ್ ಜಿಮ್ಖಾನದ ಆವರಣದಲ್ಲಿ ಸಿ.ಅಶ್ವತ್ಥ್ ಕಲಾ ಬಳಗ ಹಾಗೂ ಮಂಜುನಾಥ ಲಲಿತ ಕಲಾ ಬಳಗ ಇವುಗಳ ಸಂಯುಕ್ತಾಶ್ರಯದಲ್ಲಿ ಕುವೆಂಪುರವರು ರಚಿಸಿದ ಪ್ರಸಿದ್ಧ ಭಾವಗೀತೆಗಳ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಕುವೆಂಪುರವರ ಭಾವಚಿತ್ರಕ್ಕೆ ಜಿಮ್ಖಾನ ಅಧ್ಯಕ್ಷರಾದ ಕೆ.ಜಿತೇಂದ್ರ ಅವರು ಮಾಲಾರ್ಪಣೆ ಮಾಡಿ ಮಾತನಾಡುತ್ತಾ, ಕುವೆಂಪು ಅವರು ವಿಶ್ವಮಾನವ ಸಂದೇಶವನ್ನು ಸಾರಿ ಸರ್ವಜನತೆಗೆ ಮಾನವೀಯ ಮೌಲ್ಯಗಳನ್ನು ತಿಳಿಸಿಕೊಟ್ಟವರು. ಅವರು ಜಾತಿ, ಮಥ, ಪಂಥವನ್ನು ಮೀರಿ ಬೆಳೆಯಲು ಕರೆ ನೀಡಿದ್ದರು. ಅವರು ರಚಿಸಿದ ಸಾಹಿತ್ಯ ಎಂದೆಂದಿಗೂ ಸ್ಥಿರಸ್ಥಾಯಿಯಾಗಿ ಉಳಿದಿದೆ. ಅವರ ಸಾಹಿತ್ಯವನ್ನು ಓದುವ ಮೂಲಕ ಉತ್ತಮ ನಾಗರೀಕರಾಗಿ ಜೀವನ ಸಾಗಿಸಬೇಕೆಂದು ತಿಳಿಸಿದರು.
ಆರಂಭದಲ್ಲಿ ಮಹಂತೇಶ್ ಗೋವಿಂದವಾಡ ಇವರು ಪ್ರಾಥರ್ಿಸಿದರು. ಮಂಜುನಾಥ ಗೋವಿಂದವಾಡ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 