ಬಳ್ಳಾರಿ: ಸಂಸದ ಈ.ತುಕಾರಾಮ್ ಅವರ ಪ್ರವಾಸ
Bellary: MP E. Tukaram's tour
ಬಳ್ಳಾರಿ 27: ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರಾದ ಈ.ತುಕಾರಾಮ್ ಅವರು ನ.28 ರಂದು ಬಳ್ಳಾರಿಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ನ.28 ರಂದು ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿ ಹೊರವಲಯದ ಹೊಸ ಬೈಪಾಸ್ಯ ವೇಣಿವೀರಾಪುರ ಹತ್ತಿರದ ರಾಷ್ಟ್ರೀಯ ಹೆದ್ದಾರಿ (ಎನ್ಹೆಚ್-67) ಯೋಜನೆಯಡಿ ವೇಣಿವೀರಾಪುರ ದಿಂದ ಹಗರಿ ವರೆಗೆ ನಿರ್ಮಿಸಲಾದ ಬಳ್ಳಾರಿ ಬೈಪಾಸ್ ರಸ್ತೆಯ ಉದ್ಘಾಟನೆ ನೆರವೇರಿಸುವರು.
ಮಧ್ಯಾಹ್ನ 12 ಗಂಟೆಗೆ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರ 2024-25ನೇ ಸಾಲಿನ ಸಂಸದರ 10 ಲಕ್ಷ ರೂ. ಅನುದಾನದಲ್ಲಿ ಬಸ್ ತಂಗುದಾಣದ ಭೂಮಿಪೂಜೆಯಲ್ಲಿ ಭಾಗವಹಿಸುವರು.
ಬಳಿಕ ಮಧ್ಯಾಹ್ನ 12.30 ಕ್ಕೆ ಜಿಲ್ಲಾ ಆಸ್ಪತ್ರೆಯಲ್ಲಿ ಎನ್.ಎಂ.ಡಿ.ಸಿ ಸಿ.ಎಸ್.ಆರ್ 1200 ಲಕ್ಷ ರೂ. ಅನುದಾನದಲ್ಲಿ ಎಂ.ಆರ್.ಐ ಸ್ಕ್ಯಾನಿಂಗ್ ಸೆಂಟರ್ ಉದ್ಘಾಟನೆ ಮಾಡುವರು. ನಂತರ ನಗರದ ರಾಘವೇಂದ್ರ ಕಾಲೋನಿಯಲ್ಲಿ 2024-25ನೇ ಸಾಲಿನ ಸಂಸದರ 25 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಿರುವ ಬಳ್ಳಾರಿಯ ಆದರ್ಶ ಪಾರ್ಕ್ನಲ್ಲಿ ಪೇವರ್ಸ್ ಅಳವಡಿಕೆ ಮತ್ತು ಪಿರಾಮಿಡ್ ಯೋಗಕೇಂದ್ರಕ್ಕೆ ಭೇಟಿ ನೀಡುವರು.
ನಂತರ ಮಧ್ಯಾಹ್ನ 02.15 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ಕಿಟ್ ವಿತರಣೆ ಮಾಡುವರು. ಬಳಿಕ ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಲೀಡ್ ಬ್ಯಾಂಕ್ನ ತ್ರೈಮಾಸಿಕ ಡಿ.ಎಲ್.ಆರ್.ಸಿ/ಡಿ.ಸಿ.ಸಿ ಸಭೆಯಲ್ಲಿ ಭಾಗವಹಿಸುವರು ಎಂದು ಸಂಸದರ ಆಪ್ತ ಸಹಾಯಕರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 