ಬಳ್ಳಾರಿ: ಮನ್-ಧನ್ ಯೋಜನೆ ಜಾಗೃತಿ ಅಭಿಯಾನ
ಲೋಕದರ್ಶನ ವರದಿ
ಬಳ್ಳಾರಿ 20: ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರಿಗೆ 60 ವರ್ಷಗಳ ನಂತರ ಪಿಂಚಣಿ ಸೌಲಭ್ಯದಿಂದ ಜೀವನ ರೂಪಿಸಿಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಶ್ರಮಯೋಗಿ ಮನ್-ಧನ್ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಚಂದ್ರಶೇಖರ್ ಎನ್.ಐಲಿ ಹೇಳಿದರು.
ಕಾಮರ್ಿಕ ಇಲಾಖೆಯ ವತಿಯಿಂದ ಬಳ್ಳಾರಿ ಸಮೀಪದ ಅಂದ್ರಾಳ್ ಗ್ರಾಮ ಸರಕಾರಿ ಶಾಲಾ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ಪ್ರಧಾನ ಮಂತ್ರಿ ಶ್ರಮಯೋಗಿ ಮನ್-ಧನ್ ಯೋಜನೆ ಮತ್ತು ಅಸಂಘಟಿತ ಕಾಮರ್ಿಕರು ಅರಕುಶಲ ಕಾಮರ್ಿಕರನ್ನು ನೊಂದಾಯಿಸುವ ಅಭಿಯಾನಕ್ಕೆ ಸಂಬಂಧಿಸಿದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಯೋಜನಗೆ ಒಳಪಡಬೇಕಾದರೇ ಅಸಂಘಟಿತ ಕಾಮರ್ಿಕರಾಗಿದ್ದು 18 ರಿಂದ 40ವರ್ಷ ವಯೋಮಿತಿ ಇರಬೇಕು, ಮಾಸಿಕ ಅದಾಯ 15ಸಾವಿರ ರೂ.ಗಳು ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಈ ಯೋಜನೆ ಅಡಿಯಲ್ಲಿ ಅಸಂಘಟಿತ ಕಾಮರ್ಿಕರಾದ ಗೃಹ, ಬೀದಿ ಬದಿ ವ್ಯಾಪಾರಿಗಳು, ಬೀಡಿ, ಚಿಂದಿ ಆಯುವವರು, ನರೇಗಾ ಅಕುಶಲ ಹಾಗೂ ಮುಂತಾದ ಅಸಂಘಟಿತ ಕಾಮರ್ಿಕರು ಈ ಯೋಜನೆಗೆ ಒಳಪಟ್ಟಿರುತ್ತಾರೆ ಎಂದರು.
ಪ್ರಧಾನಮಂತ್ರಿ ಶ್ರಮಯೋಗಿ ಮನ್-ಧನ್ ಯೋಜನೆಯ ಮಾಹಿತಿಹೊತ್ತ ಹಾಗೂ ಧ್ವನಿವರ್ಧಕಗಳೊಂದಿಗೆ ವಾಹನವು ಇಡೀ ಗ್ರಾಮದಾದ್ಯಂತ ಸಂಚರಿಸಿತು. ಇದೇ ಸಂದರ್ಭದಲ್ಲಿ ಈ ಯೋಜನೆಗೆ ಸಂಬಂಧಿಸಿದ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಯೋಜನೆಯ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕ ಸಿ.ಎನ್.ರಾಜೇಶ್, ಕಾರ್ಮಿಕ ಇಲಾಖೆಯ ಕಾರ್ಯನಿರ್ವಾಹಕ ಶಿವರಾಜ್ ಆರ್.ಎನ್, ಕಾರ್ಮಿಕ ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 