ಬಳ್ಳಾರಿ: ಜಿಲ್ಲಾಧಿಕಾರಿಯಾಗಿ ನಕುಲ್ ಅಧಿಕಾರ ಸ್ವೀಕಾರ
ಲೋಕದರ್ಶನ ವರದಿ
ಬಳ್ಳಾರಿ 19: ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಎಸ್.ಎಸ್.ನಕುಲ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಪ್ರಭಾರ ಜಿಲ್ಲಾಧಿಕಾರಿಗಳಾದ ಜಿಪಂ ಸಿಇಒ ಕೆ.ನಿತೀಶ್ ಅವರು ಅಧಿಕಾರ ಹಸ್ತಾಂತರಿಸಿದರು.
ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿತ್ತು. ಅವರ ಜಾಗಕ್ಕೆ ಎಸ್.ಎಸ್.ನಕುಲ್ ಅವರನ್ನು ನೇಮಿಸಿತ್ತು.
ಈ ಮುಂಚೆ ನಕುಲ್ ಅವರು ಬಳ್ಳಾರಿ ಜಿಪಂ ಸಿಇಒ ಆಗಿ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಬಳ್ಳಾರಿ ಜಿಲ್ಲಾಧಿಕಾರಿಯಾಗಿ 3 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಅಧಿಕಾರ ಸ್ವೀಕರಿಸಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಶುಭಾಷಯ ಕೋರಿದರು. ನಂತರ ಅವರು ಅಧಿಕಾರಿಗಳ ಸಭೆ ನಡೆಸಿ ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 