ಬಳ್ಳಾರಿ: ನೋಟರಿಯವರ ಸೇವೆ ಅಪೂರ್ವ ಕೊಡುಗೆ
ಲೋಕದರ್ಶನ ವರದಿ
ಬಳ್ಳಾರಿ 25: ನೋಟರಿಯವರ ಸೇವೆ ನ್ಯಾಯಾಂಗ ಮತ್ತು ಸರ್ಕಾರಕ್ಕೆ ಸಲ್ಲುವ ಅಪೂರ್ವ ಕೊಡುಗೆಯಾಗಿದೆ. ಇದು ಪವಿತ್ರವಾದ ಹುದ್ದೆಯಾಗಿದ್ದು ಸಾರ್ವಜನಿಕರಿಗೆ ಸದುಪಯೋಗವಾಗಿದೆ ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಖಾಸೀಂ ಚೂರಿಖಾನ್ ಅವರು ಹೇಳಿದರು. ಜಿಲ್ಲಾ ಗೌರವಾನ್ವಿತ ನೋಟರಿಗಳ ವೇದಿಕೆ ಮತ್ತು ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದ ವತಿಯಿಂದ ಇತ್ತಿಚೆಗೆ ನಗರದ ಕೋರ್ಟ ಆವರಣದಲ್ಲಿ ಆಯೋಜಿಸಿದ ಕಾನೂನು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನ್ಯಾಯಧೀಶರ ಈ ಕಾರ್ಯ ನಿರ್ವಹಣೆಯ ವ್ಯಾಪ್ತಿ ಹೆಚ್ಚಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್ ಎಸ್.ಮಲ್ಲೂರು ಮಾತನಾಡಿ, ನೋಟರಿಯವರ ಜವಾಬ್ದಾರಿಯು ಪಬ್ಲಿಕ್ ಅಫೀಷಿಯಲ್ ಅಧಿಕಾರಿ ಎಂದರು.
ಈ ಸಂದರ್ಭದಲ್ಲಿ ನೋಟರಿ ಅಸೋಸಿಯೇಷನ್ನ ಮಾಜಿ ರಾಜ್ಯಾಧ್ಯಕ್ಷರು ಹಾಗೂ ಅಖಿಲ ಭಾರತ ನೋಟರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಆಸಿಫ್ ಅಲಿ, ಕೆ.ಚನ್ನಪ್ಪ, ಡಾ.ಎಚ್. ರಾಘವೇಂದ್ರಚಾರ್ ಅವರು ಮಾತನಾಡಿದರು. ವಕೀಲರಾದ ಬಿ.ರಾಘವೇಂದ್ರ ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ವಕೀಲರು ಸೇರಿದಂತೆ ಇತರರು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 