ಬಳ್ಳಾರಿ: ನೋಟರಿಯವರ ಸೇವೆ ಅಪೂರ್ವ ಕೊಡುಗೆ
ಲೋಕದರ್ಶನ ವರದಿ
ಬಳ್ಳಾರಿ 25: ನೋಟರಿಯವರ ಸೇವೆ ನ್ಯಾಯಾಂಗ ಮತ್ತು ಸರ್ಕಾರಕ್ಕೆ ಸಲ್ಲುವ ಅಪೂರ್ವ ಕೊಡುಗೆಯಾಗಿದೆ. ಇದು ಪವಿತ್ರವಾದ ಹುದ್ದೆಯಾಗಿದ್ದು ಸಾರ್ವಜನಿಕರಿಗೆ ಸದುಪಯೋಗವಾಗಿದೆ ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಖಾಸೀಂ ಚೂರಿಖಾನ್ ಅವರು ಹೇಳಿದರು. ಜಿಲ್ಲಾ ಗೌರವಾನ್ವಿತ ನೋಟರಿಗಳ ವೇದಿಕೆ ಮತ್ತು ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದ ವತಿಯಿಂದ ಇತ್ತಿಚೆಗೆ ನಗರದ ಕೋರ್ಟ ಆವರಣದಲ್ಲಿ ಆಯೋಜಿಸಿದ ಕಾನೂನು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನ್ಯಾಯಧೀಶರ ಈ ಕಾರ್ಯ ನಿರ್ವಹಣೆಯ ವ್ಯಾಪ್ತಿ ಹೆಚ್ಚಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್ ಎಸ್.ಮಲ್ಲೂರು ಮಾತನಾಡಿ, ನೋಟರಿಯವರ ಜವಾಬ್ದಾರಿಯು ಪಬ್ಲಿಕ್ ಅಫೀಷಿಯಲ್ ಅಧಿಕಾರಿ ಎಂದರು.
ಈ ಸಂದರ್ಭದಲ್ಲಿ ನೋಟರಿ ಅಸೋಸಿಯೇಷನ್ನ ಮಾಜಿ ರಾಜ್ಯಾಧ್ಯಕ್ಷರು ಹಾಗೂ ಅಖಿಲ ಭಾರತ ನೋಟರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಆಸಿಫ್ ಅಲಿ, ಕೆ.ಚನ್ನಪ್ಪ, ಡಾ.ಎಚ್. ರಾಘವೇಂದ್ರಚಾರ್ ಅವರು ಮಾತನಾಡಿದರು. ವಕೀಲರಾದ ಬಿ.ರಾಘವೇಂದ್ರ ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ವಕೀಲರು ಸೇರಿದಂತೆ ಇತರರು ಇದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 