ಬಳ್ಳಾರಿ: ಪ್ಲಾಸ್ಟಿಕ್ ದಾಳಿ ಕಾಯರ್ಾಚರಣೆ 18500 ರೂ. ದಂಡ
ಲೋಕದರ್ಶನ ವರದಿ
ಬಳ್ಳಾರಿ 03: ಮಹಾನಗರ ಪಾಲಿಕೆಯಿಂದ ಪ್ಲಾಸ್ಟಿಕ್ ದಾಳಿ ಕಾರ್ಯಾಚರಣೆ ಮುಂದುವರಿದಿದೆ. ಪಾಲಿಕೆ ಆಯುಕ್ತೆ ತುಷಾರಮಣಿ ಅವರ ನೇತೃತ್ವದಲ್ಲಿ ನಗರದ ವಿವಿಧೆಡೆ ಗುರುವಾರ ದಾಳಿ ನಡೆಸಿದ ಪಾಲಿಕೆಯ ಕಂದಾಯ ಮತ್ತು ಆರೋಗ್ಯ ಇಲಾಖೆಗಳ ತಂಡ ಅಪಾರ ಪ್ರಮಾಣದಲ್ಲಿ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದು, 18500 ರೂ. ದಂಡ ವಿಧಿಸಿದೆ.
ನಗರದ ಇನ್ಫೆಂಟ್ರಿ ರಸ್ತೆ ಸೇರಿದಂತೆ ವಿವಿಧ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿ ದಾಳಿ ನಡೆಸಿದ ಆಯುಕ್ತೆ ತುಷಾರಮಣಿ ನೇತೃತ್ವದ ತಂಡ ಅಪಾರ ಪ್ರಮಾಣದ ಪ್ಲಾಸ್ಟಿಕ್ ವಶಪಡಿಸಿಕೊಂಡಿದೆ ಮತ್ತು ದಂಡ ವಿಧಿಸಿ ಖಡಕ್ ಸೂಚನೆ ಕೂಡ ನೀಡಲಾಗಿದೆ.
ಬಳ್ಳಾರಿ ಮಹಾನಗರ ಪಾಲಿಕೆ ಆವರಣವನ್ನು ಪ್ಲಾಸ್ಟಿಕ್ ಮುಕ್ತ ವಲಯವೆಂದು ಘೋಷಿಸಲಾಗಿದ್ದು, ಯಾವುದೇ ರೀತಿಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಮತ್ತು ಪ್ಲಾಸ್ಟಿಕ್ ವಸ್ತುಗಳು ಈ ಆವರಣದಲ್ಲಿ ಬಳಸುತ್ತಿರುವುದು ಕಂಡುಬಂದಲ್ಲಿ 500 ರೂ.ದಂಡ ವಿಧಿಸಲಾಗುವುದು ಎಂದು ಪಾಲಿಕೆ ಆಯುಕ್ತೆ ತುಷಾರಮಣಿ ಎಚ್ಚರಿಕೆ ನೀಡಿದ್ದಾರೆ. ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ಗಳನ್ನು ಬಳಸುವಂತೆ ಅವರು ಸಲಹೆ ನೀಡಿದ್ದಾರೆ.
ಇದುವರೆಗೆ ಟ್ರೇಡ್ಲೈಸನ್ಸ್ ಪಡೆಯದಿದ್ದವರು ಕೂಡಲೇ ಲೈಸೆನ್ಸ್ ಪಡೆದುಕೊಳ್ಳಬೇಕು; ಇಲ್ಲದಿದ್ದಲ್ಲಿ ದುಪ್ಪಟ್ಟು ಪ್ರಮಾಣದ ದಂಡ ವಿಧಿಸಲಾಗುವುದು ಮತ್ತು ಲೈಸನ್ಸ್ ಪ್ರಮಾಣಪತ್ರವನ್ನು ಅಂಗಡಿಯ ಎದುರುಗಡೆ ನಾಮಫಲಕದಲ್ಲಿ ಲಗತ್ತಿಸಬೇಕ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 