ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ
ಲೋಕದರ್ಶನ ವರದಿ
ಬಳ್ಳಾರಿ 13: ಪೊಲೀಸ್ ಇಲಾಖೆಯ ಸಿಬ್ಬಂದಿಯವರು ಕರ್ತವ್ಯದ ಜೊತೆಗೆ ಉತ್ತಮ ಹವ್ಯಾಸಗಳನ್ನು ಬೆಳಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಕರೆ ನೀಡಿದರು.
ನಗರದ ಡಿ.ಎ.ಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆಯ ವಾಷರ್ಿಕ ಕ್ರೀಡಾಕೂಟ -2019ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿಯೊಂದು ಸಭೆ, ಸಮಾರಂಭ, ಕ್ರೈಮ್ನಲ್ಲಿ ಹಾಗೂ ಇತರೆ ಕಾರ್ಯಕ್ರಮಗಳಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಒತ್ತಡದ ಕೆಲಸದಲ್ಲಿ ಕೌಟುಂಬಿಕ ಜೀವನಕ್ಕೆ ನಿಗದಿತ ಸಮಯ ಅವಕಾಶ ಕಡಿಮೆ ಇರುತ್ತದೆ. ಒತ್ತಡವನ್ನು ಹೊಗಲಾಡಿಸಲು ತಾವುಗಳು ಕುಟುಂಬಕ್ಕೆ ಸಮಯ ನೀಡಬೇಕು ಮತ್ತು ಅವರೊಂದಿಗೆ ಬೆರೆಯಬೇಕು ಎಂದರು.
ಸಾರ್ವಜನಿಕರು ಸುಖ ನಿದ್ರೆ, ನೆಮ್ಮದಿ ಜೀವನ ಸಾಗಿಸುತ್ತಿರುವಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿಯ ಪಾತ್ರ ಅತ್ಯಂತ ಪ್ರಶಂಸನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಡಿಸಿ ನಕುಲ್ ಅವರು ಈ ಕ್ರೀಡಾಕೂಟದಲ್ಲಿ ಸಿಬ್ಬಂದಿಗಳು ಸ್ಪೂರ್ತಿಯಿಂದ ಭಾಗವಹಿಸಿ, ಈ ಸಮಯವನ್ನು ತಾವುಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಮಾತನಾಡಿ, ಸಿಬ್ಬಂದಿಗಳು ವರ್ಷದುದ್ದಕ್ಕೂ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿದಿನ ಹೊಸ ಹೊಸ ಕ್ರೈಮ್ಗಳು ಸೃಷ್ಟಿಯಾಗುತ್ತಿವೆ, ಈ ಕುರಿತು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಆರ್ಥಿಕ ವಂಚನೆ, ಮಹಿಳಾ ಮತ್ತು ಮಕ್ಕಳ ರಕ್ಷಣೆ ಹಾಗೂ ಇತರೆ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಲ್ಲಿ ವೀಡಿಯೋ ತುಣುಕು, ಕರಪತ್ರಗಳ ಮೂಲಕ ಅರಿವು ಮೂಡಿಸುತ್ತಿದ್ದಾರೆ ಎಂದರು. ಈ ಮುಂದಿನ ದಿನಗಳಲ್ಲಿ ಸಹ ಇದೇ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂದಿಗಳಿಗೆ ತಿಳಿಸಿದರು.
ಎಲ್ಲರು ಸ್ಪಧರ್ಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡಬೇಕು ಎಂದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಲಾವಣ್ಯ ಬಿ.ಎನ್ ಅವರು ವಂದಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು, ಗಣ್ಯವ್ಯಕ್ತಿಗಳು ಸೇರಿದಂತೆ ಇತರರು ಇದ್ದರು
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 