ಬಳ್ಳಾರಿ: ಜಿಲ್ಲಾ ಸಂಕೀರ್ಣ ಕಟ್ಟಡದ ವಿನ್ಯಾಸ ಮಾಹಿತಿ ಒದಗಿಸಿ: ಎಡಿಸಿ ಮಂಜುನಾಥ
ಲೋಕದರ್ಶನ ವರದಿ
ಬಳ್ಳಾರಿ 05: ನಗರದಲ್ಲಿ ನಿಮರ್ಿಸಲಾಗುತ್ತಿರುವ ಜಿಲ್ಲಾ ಸಂಕೀರ್ಣ ಕಟ್ಟಡದ ವಿನ್ಯಾಸ ಅಂತಿಮಗೊಳಿಸುವಿಕೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಅಪರ ಜಿಲ್ಲಾಧಿಕಾರಿ ಮಂಜುನಾಥ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಜೆ ನಡೆಯಿತು.
ಜಿಲ್ಲಾ ಸಂಕೀರ್ಣ ಕಟ್ಟಡ ಕಾಮಗಾರಿ ಭರದಿಂದ ಸಾಗಿದೆ. ಈ ಕಟ್ಟಡದ ವಿನ್ಯಾಸ ಅಂತಿಮಗೊಳಿಸಲಾಗುತ್ತಿದ್ದು, ಸರಕಾರಿ ಇಲಾಖೆಗಳು ತಮಗೆ ಅಗತ್ಯವಿರುವಷ್ಟು ವಿಸ್ತೀರ್ಣದ ಮಾಹಿತಿಯನ್ನು ಕೂಡಲೇ ಒಪ್ಪಿಸಬೇಕು ಎಂದರು.
ನಮ್ಮ ಇಲಾಖೆಯ ಸ್ವಂತ ಕಟ್ಟಡವಿದೆ;ಈ ಜಿಲ್ಲಾ ಸಂಕೀರ್ಣ ಕಟ್ಟಡದಲ್ಲಿ ನಮಗೆ ಅವಕಾಶ ಬೇಡ ಎಂದು ಹೇಳುವವರು ಲಿಖಿತವಾಗಿ ಸಲ್ಲಿಸಿದಲ್ಲಿ ಅದನ್ನು ಬೇರೆ ಅಗತ್ಯವಿರುವ ಇಲಾಖೆಗಳಿಗೆ ನೀಡಲಾಗುವುದು ಎಂದು ಅವರು ಹೇಳಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಗೆ ಅಗತ್ಯವಿರುವ ವಿಸ್ತೀರ್ಣದ ಮಾಹಿತಿಯನ್ನು ಈ ಸಂದರ್ಭದಲ್ಲಿ ಒದಗಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಗೃಹಮಂಡಳಿ ಅಧಿಕಾರಿಗಳಾದ ಶಿವಶಂಕರ, ದತ್ತಾತ್ರೇಯ ಶೆಟ್ಟಿ, ಡಿಯುಡಿಸಿ ಅಧಿಕಾರಿ ರಮೇಶ, ಸಹಕಾರ ಇಲಾಖೆಯ ಉಪನಿಬಂಧಕಿ ಡಾ.ಸುನೀತಾ ಸಿದ್ರಾಮ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 