ಬಳ್ಳಾರಿ: ಜ.26ರಂದು ವಿಜೃಂಭಣೆಯ ಗಣರಾಜ್ಯೋತ್ಸವ ಆಚರಣೆ
ಲೋಕದರ್ಶನ ವರದಿ
ಬಳ್ಳಾರಿ 24: ಜಿಲ್ಲಾಡಳಿತ ವತಿಯಿಂದ 71ನೇ ಗಣರಾಜ್ಯೋತ್ಸವ ದಿನಾಚಾರಣೆಯನ್ನು ಜ.26ರಂದು ಅತ್ಯಂತ ವಿಜೃಂಭಣೆಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ತಿಳಿಸಿದ್ದಾರೆ. ಉಪಮುಖ್ಯಮಂತ್ರಿ, ಸಾರಿಗೆ ಮತ್ತು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ವಿಮ್ಸ್ ಆವರಣದಲ್ಲಿರುವ ಮಹಾತ್ಮ ಗಾಂಧಿಜಿಯವರ ಪ್ರತಿಮೆಗೆ ಬೆಳಗ್ಗೆ 8.45ಕ್ಕೆ ಗೌರವ ಸಮರ್ಪಣೆ ಮಾಡಲಿದ್ದಾರೆ.
ನಂತರ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಬೆಳಗ್ಗೆ 9ಕ್ಕೆ ಧ್ವಜಾರೋಹಣ ನೆರವೇರಿಸಿ ಪಥ ಸಂಚನಲನ ವೀಕ್ಷಣೆ ಹಾಗೂ ಗೌರವ ಸ್ವೀಕರಿಸಲಿದ್ದಾರೆ. ನಂತರ ಸಚಿವರು ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ಇದಾದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ವಿವರಿಸಿದ್ದಾರೆ.
ಜಿಪಂ ಅಧ್ಯಕ್ಷರಾದ ಸಿ.ಭಾರತಿ ತಿಮ್ಮರೆಡ್ಡಿ, ಸಂಸದರಾದ ವೈ.ದೇವೇಂದ್ರಪ್ಪ, ಜಿ.ಎಂ.ಸಿದ್ದೇಶ್ವರ, ಕರಡಿ ಸಂಗಣ್ಣ, ಡಾ. ಸೈಯದ್ ನಾಸೀರ್ ಹುಸೇನ್, ಶಾಸಕರಾದ ಆನಂದ್ಸಿಂಗ್, ಈ.ತುಕಾರಾಂ, ಬಿ.ನಾಗೇಂದ್ರ, ಪಿ.ಟಿ ಪರಮೇಶ್ವರ ನಾಯ್ಕ, ಎನ್.ವೈ.ಗೋಪಾಲಕೃಷ್ಣ, ಭೀಮಾನಾಯಕ್ ಎಲ್.ಸಿ.ಪಿ, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಜಿ.ಕರುಣಾಕರ ರೆಡ್ಡಿ, ಜಿ.ಸೋಮಶೇಖರರೆಡ್ಡಿ, ಎಂ.ಎಸ್. ಸೋಮಲಿಂಗಪ್ಪ, ಜೆ.ಎನ್.ಗಣೇಶ್, ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಬಿ.ಪಾಟೀಲ, ತಾಪಂ ಅಧ್ಯಕ್ಷರಾದ ಎಸ್.ಆರ್.ಲೀಲಾವತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸಂಜೆ 6ಕ್ಕೆ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿವೆ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 