ಬಳ್ಳಾರಿ: ರೈಲ್ವೇ ಬೇಡಿಕೆಗಳಿಗೆ ಆಗ್ರಹಿಸಿ ವ್ಯವಸ್ಥಾಪಕರಿಗೆ ಮನವಿ
ಲೋಕದರ್ಶನ ವರದಿ
ಬಳ್ಳಾರಿ 25: ರೈಲ್ವೇಅಭಿವೃದ್ದಿ ಕ್ರಿಯಾ ಸಮಿತಿ ಹಾಗೂ ರೈಲ್ವೇ ಸಲಹಾ ಸಮಿತಿ ನೇತೃತ್ವದಲ್ಲಿ ಈ ಭಾಗದ ರೈಲ್ವೇ ಬೇಡಿಕೆಗಳ ಬಗ್ಗೆ ನೈರುತ್ಯ ರೈಲ್ವೇ ವಲಯದ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಅಜಯ್ ಕುಮಾರ್ ಸಿಂಗ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕ್ರಿಯಾ ಸಮಿತಿ ಅಧ್ಯಕ್ಷರಾದ ವೈ.ಯಮುನೇಶ್ ಅವರು ಈಗಾಗಲೆ ಪ್ರಕಟಿಸಿರುವಂತೆ ಆಗಸ್ಟ್ 31ರ ಒಳಗಾಗಿ ಹೊಸಪೇಟೆ -ಕೊಟ್ಟೂರು ಮಧ್ಯೆ ಪ್ಯಾಸಿಂಜರ್ ರೈಲು ಆರಂಭಕ್ಕೆ ಚಾಲನೆ ನೀಡಬೇಕೆಂದು ಆಗ್ರಹಿಸಿದರು.
ಮನವಿಗೆ ಪ್ರತಿಕ್ರಿಯಿಸಿದ ಪ್ರಧಾನ ವ್ಯವಸ್ಥಾಪಕರು ಕೆಲವು ಸಣ್ಣಪುಟ್ಟ ಕಾಮಗಾರಿಗಳು ತ್ವರಿತವಾಗಿ ನಡೆಯುತ್ತಿದ್ದು, 3 ರೈಲ್ವೇ ಗೇಟುಗಳನ್ನು ಮುಚ್ಚಲು ಕ್ರಮ ಕ್ರಮ ಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಈ ಎಲ್ಲಾ ಕಾಮಗಾರಿಗಳನ್ನು ಆಗಸ್ಟ್ 15ರ ಗಡುವಿನೊಳಗಾಗಿ ಮುಗಿಸುವಂತೆ ಆದೇಶ ನೀಡಲಾಗಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ರೈಲು ಆರಂಭಿಸುವ ಭರವಸೆ ನೀಡಿದರು.
ಈ ಭಾಗದ ಮತ್ತೊಂದು ಬೇಡಿಕೆ ವಿಶ್ವ ಪ್ರಸಿದ್ದ ಹಂಪಿ, ಮಂತ್ರಾಲಯ, ಮುಂತಾದ ಪ್ರವಾಸಿ ಹಾಗೂ ಯಾತ್ರಾ ಸ್ಥಳಗಳಿಗೆ ಬಸ್ಸ್ನಲ್ಲಿ ಈ ಮಾರ್ಗದ ಮೂಲಕವೇ ಸಂಚಾರದ ವ್ಯವಸ್ಥೆ ಇದೆ ಆದರೆ ಪ್ರತಿನಿತ್ಯ ಅಸಂಖ್ಯಾತ ಪ್ಯಾಸೆಂಜರ್ ಹಾಗೂ ಗೂಡ್ಸ್ಗಾಡಿಗಳ ಸಂಚಾರ ದಟ್ಟಣೆ ಇರುವುದರಿಂದ ರೈಲ್ವೆಗೇಟ್ನ ಎರಡು ಬದಿಗಳಲ್ಲಿ ವಾಹನಗಳು ಮತ್ತು ಸಾರ್ವಜನಿಕರು, ವಿದ್ಯಾಥರ್ಿಗಳು ಬಹಳಷ್ಟು ಹೊತ್ತು ಕಾಯುವ ಪರಿಸ್ಥಿತಿ ಇದೆ.
ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಎಂ.ಶ್ಯಾಮಪ್ಪ ಅಗೋಲಿ, ಟಿ.ತಿಪ್ಪೇಸ್ವಾಮಿ, ಡಾ.ಜೋಗಳೇಕರ್, ವಿಶ್ವನಾಥ ಕೌತಾಳ್, ದೀಪಕ್ ಉಳ್ಳಿ, ಕಾಶಿನಾಥ ಕುಲಕಣರ್ಿ, ಹೆಚ್.ಪೀರಾನ್ಸಾಬ್, ಶ್ರೀನಿವಾಸ್, ಪಿ.ಪ್ರಭಾಕರ್, ದೇವರೆಡ್ಡಿ, ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 