ಬಳ್ಳಾರಿ: ಶನಿ ಪರಿಪವರ್ತನಾ ಕಾರ್ಯಕ್ರಮ
ಲೋಕದರ್ಶನ ವರದಿ
ಬಳ್ಳಾರಿ 24: ನಗರದ ಸತ್ಯನಾರಾಯಣ ಪೇಟೆಯಲ್ಲಿರುವ ಶ್ರೀಶನೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಅಮಾವಾಸ್ಯೆ ದಿನದಂದು ಬೆಳಗ್ಗೆ 6 ಗಂಟೆಗೆ 108 ಲೀ.ತೈಲದಿಂದ ತೈಲಾಭಿಷೇಕವನ್ನು ಮೂಲ ದೇವರಿಗೆ ಅಪರ್ಿಸಿದರು. ನಂತರ 8:30ಕ್ಕೆ ಶಾಂತಿ ಹೋಮವನ್ನು ಹಮ್ಮಿಕೊಂಡಿದ್ದರು. ಈ ಕಾಯಕ್ರಮದಲ್ಲಿ ಸಾವಿರಾರು ಭಕ್ತಾಧಿಗಳು ಭಾಗವಹಿಸಿ ತಮ್ಮ ತಮ್ಮ ರಾಶಿಗಳಿಗೆ ಶಾಂತಿ ನಮ್ಮದಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸಿದರು.
ನಂತರ ಸಂಜೆ 5ಗಂಟೆಗೆ ಉತ್ಸವ ಮೂರ್ತಿಗೆ ತಮ್ಮ ಸ್ವ-ಹಸ್ತದಿಂದ ಮಹಾತೈಲಾಭಿಷೇಕವನ್ನು ಸಾಲು ಸಾಲಾಗಿ ಬಂದು ಅರ್ಪಣೆ ಮಾಡಿದರು. ಮೂಲ ದೇವರಿಗೆ ವಿಶೇಷ ಹೂವಿನ ಅಲಂಕಾರದೊಂದಿಗೆ ಮಹಾಮಂಗಳಾರತಿ ಕಾರ್ಯಕ್ರಮವನ್ನು ನಡೆಸಿದರು. ಈ ಎಲ್ಲಾ ಕಾರ್ಯಕ್ರಮಗಳನ್ನು ದೇವಸ್ಥಾನದ ಮುಖ್ಯ ಆರ್ಚಕರಾದ ವ್ಯಾಸರಾಜ್ ಆಚಾರ್ ಅವರು ಬಹಳ ಶಿಸ್ತಿನಿಂದ ಪೂಜಾಕಾರ್ಯಕ್ರಮವನ್ನು ನೆರವೇರಿಸಿದರು. ದೇವಸ್ಥಾವದ ವ್ಯವಸ್ಥಾಪಕ ರಾಘವೇಂದ್ರ ರಾವ್ ಕಾರ್ಯಕ್ರಮಕ್ಕೆ ಬೇಕಾದ ಪೂಜಾ ಸಾಮಾಗ್ರಿಗಳನ್ನು ವ್ಯವಸ್ಥಿತವಾಗಿ ರೂಪಿಸಿದ್ದರು. ಇದರ ಎಲ್ಲಾ ರೂವಾರಿಯನ್ನು ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾದ ಧನ ಮಲ್ಲನ ಗೌಡ ಅವರು ಈ ಕಾರ್ಯಕ್ರಮವನ್ನು ನೆರವೇರಿಸುವಲ್ಲಿ ಸಾವಿರಾರು ಭಕ್ತರಿಂದ ಪ್ರಶಂಸೆಗೆ ಪಾತ್ರರಾದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 