ಬಳ್ಳಾರಿ: ಕುಲಪತಿಯವರಿಂದ ನೂತನ ಬೋರ್ವೆಲ್ ಉದ್ಘಾಟನೆ
ಬಳ್ಳಾರಿ 20: ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಆವರಣದಲ್ಲಿ ನೀರಿನ ಅಭಾವ ಇರುವುದನ್ನು ಮನಗಂಡ ಹೆಸರು ಹೇಳಲು ಇಚ್ಚಿಸದ ಕಮಲಾಪುರದ ಹಿತೈಷಿಯೊಬ್ಬರು ಕೊಳವೆ ಬಾವಿಯೊಂದನ್ನು ಕೊರೆಸಿದ್ದು, ಕುಲಪತಿ ಡಾ.ಸ.ಚಿ.ರಮೇಶ ಅವರು ಸದರಿ ಬೋರ್ವೆಲ್ನ್ನು ಉದ್ಘಾಟಿಸಿದರು.
ಬೋಧಕೇತರ ನೌಕರರು ಮತ್ತು 'ಅಕ್ಷರದ ಅವ್ವ ಸಾವಿತ್ರಿಬಾಯಿ ಪುಲೆ' ವಿದ್ಯಾಥರ್ಿನಿಯರ ವಸತಿ ನಿಲಯದ ವಿದ್ಯಾಥರ್ಿನಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಹರ್ಷ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ 'ಅಕ್ಷರದ ಅವ್ವ ಸಾವಿತ್ರಿಬಾಯಿ ಪುಲೆ' ವಿದ್ಯಾಥರ್ಿನಿಯರೊಂದಿಗೆ ವಸತಿ ನಿಲಯದ ಕುಂದು ಕೊರತೆಗಳನ್ನು ಕುರಿತು ಚರ್ಚೆ ನಡೆಸಿದರು. ನಂತರ ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾಥರ್ಿ ವಸತಿ ನಿಲಯ "ಅನಿಕೇತನ"ಕ್ಕೆ ದಿಢೀರ್ ಭೇಟಿ ನೀಡಿ ವಸತಿ ನಿಲಯದಲ್ಲಿ ಸಿದ್ಧಪಡಿಸಿದ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆಯನ್ನು ಪರಿಶೀಲಿಸಿದರು. ಸೌಲಭ್ಯಗಳು ಮತ್ತು ಕುಂದುಕೊರತೆಗಳಿಗೆ ಸಂಬಂಧಪಟ್ಟಂತೆ ಸಂಶೋಧನಾ ವಿದ್ಯಾಥರ್ಿಗಳೊಂದಿಗೆ ಚರ್ಚಿಸಿದರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 