ಬಳ್ಳಾರಿ: ಯುವಕರಿಗೆ ಧೈರ್ಯ ಮೂಡಿಸುವ ಕಾರ್ಯಕ್ರಮ
ಲೋಕದರ್ಶನ ವರದಿ
ಬಳ್ಳಾರಿ 06: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧೀನದ ಯುವಸ್ಪಂದನ ಕೇಂದ್ರ, ಎಪಿಡಿಯಾಮಿಲಾಜಿ ವಿಭಾಗ, ಜನ ಆರೋಗ್ಯ ಕೇಂದ್ರ, ಹಾಗೂ ಬೆಂಗಳೂರಿನ ನಿಮ್ಹಾನ್ಸ್ ಇವರ ಸಂಯುಕ್ತಾಶ್ರಾಯದಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಗುರುವಾರ ನಗರದ ಸರ್ಕಾರಿ ಮಾಜಿ-ಪುರಸಭೆ) ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಯುವಸ್ಪಂದನ ಕೇಂದ್ರದ ಆಪ್ತ ಸಮಲೋಚಕರಾದ ಸುಮಲತಾ ಅವರು ಮಾತನಾಡಿ, ಇಂದಿನ ದಿನಗಳಲ್ಲಿ ಯುವಜನತೆ ಅನುಭವಿಸುತ್ತಿರುವ ಸಮಸ್ಯೆಗಳು ತಲೆಮಾರುಗಳ ನಡುವಿನ ಹೊಂದಾಣಿಕೆ ವಿಷಯಗಳಾಗಿವೆ. ಸುರಕ್ಷತೆ, ಭಾವನಾತ್ಮಕ ಹತೋಟಿ, ಲಿಂಗ ಮತ್ತು ಲೈಂಗಿಕತೆ, ಆರೋಗ್ಯ, ಜೀವನ ಶೈಲಿ ಮತ್ತು ವರ್ತನೆ, ಶಿಕ್ಷಣ ಮತ್ತು ಪಠ್ಯ ವಿಷಯ, ವ್ಯಕ್ತಿತ್ವ ಬೆಳವಣಿಗೆ ನಿರ್ಧಾರ ತೆಗೆದುಕೊಳ್ಳುವಿಕೆ, ಉದ್ಯೋಗ ಈ ವಿಷಯಗಳಲ್ಲಿ ಗೊಂದಲ ಸೃಷ್ಠಿಯಾಗುತ್ತಿವೆ ಎಂದು ಹೇಳಿದ ಅವರು ಇಂತಹ ಗೊಂದಲಗಳಿಗೆ ಉಚಿತವಾಗಿ ಆಪ್ತ ಸಮಲೋಚನೆ ಹಾಗೂ ಮಾರ್ಗದರ್ಶನ ಮೂಲಕ ಸಲಹೆ, ಸೂಚನೆ ನೀಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದರ್ೇಶಕ ಬಿ.ಸುರೇಶ ಬಾಬು, ಸಕರ್ಾರಿ(ಮಾಜಿ-ಪುರಸಭೆ) ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸದ್ರಾದ್ ಗೋಪಾಲ್, ಯುವಸ್ಪಂದನ ಕೇಂದ್ರದ ಆಪ್ತ ಸಮಲೋಚಕ ತಂಡದ ಸದಸ್ಯರು, ವಿದ್ಯಾಥರ್ಿಗಳು ಸೇರಿದಂತೆ ಇತರರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 