ಬಳ್ಳಾರಿ: ಕೃಷಿಯ ಕಡೆ ಒಲವು ತೋರಬೇಕು: ವಿಶ್ವೇಶ್ವರ
ಲೋಕದರ್ಶನ ವರದಿ
ಬಳ್ಳಾರಿ 02: ಹಸಿರು ಕ್ರಾಂತಿ ಬಂದ ಮೇಲೆ ದೇಶದಲ್ಲಿನ ಕೃಷಿಯು ಕ್ಷೀಣಿಸುತ್ತಾ ಬಂದಿದೆ ನಮ್ಮ ರೈತರು ವಿದೇಶಗಳ ತಂತ್ರಜ್ಞಾನವನ್ನು ಅಳವಡಿಸಿಕೊಂಡು ತಮ್ಮ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದಾರೆ, ಈಗಿನ ಮಕ್ಕಳು ವಿಧ್ಯಬ್ಯಾಸ ಮುಗಿಸಿದ ಮೇಲೆ ಯಾರು ಕೃಷಿ ಕಡೆ ಮುಖಮಾಡುತ್ತಿಲ್ಲ, ಬುದ್ದಿ ಜೀವಿಗಳು ಕೃಷಿಯ ಕಡೆ ಒಲವು ತೋರಿಸಬೇಕು ಎಂದು ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಸಾವಯವ ರೈತ ವಿಶ್ವೇಶ್ವರ ಸಜ್ಜನ್ ಪ್ರಸ್ತುತ ಕೃಷಿಯ ತವಕ ತಲ್ಲಣಗಳ ವಿಷಯದ ಕುರಿತು ತಿಳಿಸಿದರು.
ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ನಡೆದ 21ನೇ ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎರಡನೇ ದಿನವಾದ ಭಾನುವಾರದಂದು ಕೃಷಿ ಮತ್ತು ಕೈಗಾರಿಕೆ ಗೋಷ್ಠಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಈ ಗೋಷ್ಠಿಯಲ್ಲಿ ರೈತ ಧುರೀಣರಾದ ಜೆ.ಎಂ.ವೀರಸಂಗಯ್ಯ ಅವರು ಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ್ದರು, ಹಾಗೂ ಬಳ್ಳಾರಿ ವೀರಶೈವ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ರಾಜಶ್ರೀ ಪಾಟೀಲ್ ಅವರು ಆಶಯ ನುಡಿಗಳನ್ನಾಡಿದರು.
ಈ ಸಂದರ್ಭದಲ್ಲಿ ದರೂರು ಪುರುಗಫೀತ್ತಮಗೌಡ, ಕೆ.ಚೆನ್ನಪ್ಪ, ಬಿ.ಮಹಾರುದ್ರ ಗೌಡ, ಕೆ.ಎಂ.ಹೇಮಯ್ಯ ಸ್ವಾಮಿ, ವಿ.ಎಸ್.ಶಿವಶಂಕರ್, ಜೆ.ಕಾರ್ತಿಕ್, ಎಂ.ಶರಣಬಸವನಗೌಡ, ಬಿ.ಎಂ.ವೀರಪ್ಪಯ್ಯ, ಎನ್.ಎಮ್.ಶಿವಪ್ರಕಾಶ್, ಕ.ಸಾ.ಪ ಜಿಲ್ಲಾಧ್ಯಕ್ಷರಾದ ಸಿದ್ದರಾಮ ಕಲ್ಮಠ, ರೈತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 