ಬಳ್ಳಾರಿ; ನಿರಾಶ್ರಿತರಿಗೆ ಒಂದು ಲಕ್ಷ ರೂಪಾಯಿ ಚೆಕ್ ದೇಣಿಗೆ
ಲೋಕದರ್ಶನ ವರದಿ
ಬಳ್ಳಾರಿ 14: ಕಳೆದ ಕೆಲ ದಿನಗಳಿಂದ ಕರ್ನಾಟಕದ ಉತ್ತರ, ಕರಾವಳಿ ಮತ್ತು ದಕ್ಷಿಣ ಭಾಗದ 17ಕ್ಕೂ ಹೆಚ್ಚು ಜಿಲ್ಲೆಗಳು ಮಳೆಯಿಂದ ಮತ್ತು ಮಹರಾಷ್ಟ್ರದ ಕೊಯ್ನಾ ಆಣೆಕಟ್ಟೆಯಿಂದ ಹೊರ ಬಿಟ್ಟ ನೀರಿನಿಂದ ರಾಜ್ಯದ ಎಲ್ಲಾ ನದಿಗಳು ಉಕ್ಕಿ ಹರಿದು ಈ ಜಿಲ್ಲೆಗಳ ಹಲವಾರು ಊರುಗಳು ನೀರಿನಲ್ಲಿ ಮುಳುಗಿ ಅಲ್ಲಿನ ನಿವಾಸಿಗಳು ತಮ್ಮ ಮನೆ, ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅವರ ಈ ಕಷ್ಟಕರವಾದ ಪರಿಸ್ಥಿತಿಯಲ್ಲಿ ನಮ್ಮ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿವೃತ್ತ ನೌಕರರು ಅಳಿಲು ಸೇವೆಯ ಭಾಗವಾಗಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಒಂದು ಲಕ್ಷ ರೂಪಾಯಿಗಳ ಚೆಕ್ನ್ನು ಬಳ್ಳಾರಿ ಜಿಲ್ಲಾಧಿಕಾರಿಗಳಾದ ಶ್ರೀ ಎಸ್.ಎಸ್.ನಕುಲ್ ಅವರ ಮೂಲಕ ಮುಖ್ಯಮಂತ್ರಿಗಳ ನೆರೆಹಾವಳಿ ಪರಿಹಾರ ನಿಧಿಗೆ ದೇಣಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶಿವಕುಮಾರ್ ಕೌತಾಳ್, ಪ್ರಧಾನ ಕಾರ್ಯದರ್ಶಿಗಳಾದ ಗಂಗಪ್ಪ ಪತ್ತಾರ್, ಬಳ್ಳಾರಿ ವಲಯ ಕಾರ್ಯದರ್ಶಿಗಳಾದ ಡಾ. ವೆಂಕಟಯ್ಯ ಅಪ್ಪಗೆರೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಪಾಟೀಲ್ ಮಲ್ಲನಗೌಡ ಮತ್ತು ಸುರೇಶ್ ಅವರುಗಳು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 