ಬಳ್ಳಾರಿ; ಅಡುಗೆ ಅನಿಲ ಸಿಲಿಂಡರ್ ಸ್ಪೋಟಿಸಿ ತಾಯಿ ಮಗಳು ಸಾವು
ಬಳ್ಳಾರಿ, ಜ 6, ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದ ಇಬ್ಬರು ಸದಸ್ಯರು ಮೃತಪಟ್ಟಿರುವ ದುರ್ಘಟನೆ ತಾಲೊಕಿನ ಸಂಜೀವರಾಯನ ಕೋಟೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ.ಮೃತ ದುರ್ದೈವಿಗಳನ್ನು ತಾಯಿ ಪಾರ್ವರ್ತಿ, ಮಗಳು ಹುಲಿಯಮ್ಮ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಡುಗೆಮನೆಯಲ್ಲಿ ತಾಯಿ ಮಗಳು ಬೆಳಗಿನ ಉಪಹಾರ ಸಿದ್ದಪಡಿಸುತ್ತಿದ್ದಾಗ ಅನಿಲ ಸಿಲಿಂಡರ್ ಸ್ಪೋಟಗೊಂಡು ದುರಂತ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ಮನೆಯ ಹೆಚ್ಚಿನ ಭಾಗ ಜಖಂಗೊಂಡಿದ್ದು, ಸ್ಥಳಕ್ಕೆ ದಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದ ಅಗ್ನಿಶಾಮಕ ಸಿಬ್ಬಂದಿ ಅಡುಗೆಮನೆಯಲ್ಲಿ ಸುಟ್ಟು ಕರಕಲಾಗಿದ್ದ ತಾಯಿ- ಮಗಳ ಮೃತ ದೇಹವನ್ನುಹೊರಗೆ ಸಾಗಿಸಿದ್ದಾರೆ.ಬಳ್ಳಾರಿ ಗ್ರಾಮೀಣ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 