ಬೆಂಗಳೂರು: ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಸಮ್ಮುಖದಲ್ಲಿ ಮೋದಿ ಪರ ಘೋಷಣೆ
ಬೆಂಗಳೂರು, ಮಾ 22 : ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚಿತ್ರನಟ ಪ್ರಕಾಶ್ ರೈ ನಾಮಪತ್ರ ಸಲ್ಲಿಸಿದ ನಂತರ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿದರು.
ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಹೊರಡುವ ವೇಳೆ ಬಿಜೆಪಿ ಮುಖಂಡ ಪದ್ಮನಾಭ ರೆಡ್ಡಿ ಮತ್ತವರ ಬೆಂಬಲಿಗರು "ಮೋದಿ ಮೋದಿ" ಎಂದು ಜೈಕಾರ ಕೂಗಿದರು. ಆಗ ಪ್ರಕಾಶ್ ರೈ ಕಾರಿನಿಂದ ಮೇಲೆ ಹತ್ತಿ "ಬೇದಿ, ಬೇದಿ" ಎಂದು ಪ್ರತಿ ಘೋಷಣೆ ಕೂಗಿದರು. ನರೇಂದ್ರ ಮೋದಿ ನೀಡಿದ್ದ ಭರವಸೆಯಂತೆ ಎಲ್ಲಿದೆ 15 ಲಕ್ಷ ರೂ ಎಂದು ತಿರುಗೇಟು ನೀಡಿದರು.
ಇದಕ್ಕೂ ಮುನ್ನ ಸುದಿಗಾರರೊಂದಿಗೆ ಮಾತನಾಡಿದ ಪ್ರಕಾಶ್ ರೈ, ತಮ್ಮ ಪರವಾಗಿ ಚಿತ್ರರಂಗದವರು ಪ್ರಚಾರಕ್ಕೆ ಬರುವ ಅಗತ್ಯವಿಲ್ಲ, ಇದು ನನ್ನ ಮತ್ತು ಮತದಾರನ ನಡುವೆ ನಡೆಯುವ ಸಂವಾದವಾಗಿದೆ. ನಾನೂ ಯಾರ ಪ್ರತಿಸ್ಪರ್ದಿಯೂ ಅಲ್ಲ, ಕಾಂಗ್ರೆಸ್ ಕೂಡ ಜಾತಿವಾದಿ ಪಕ್ಷವಾಗಿದೆ. ಕೇವಲ ಮುಸ್ಲಿಂ, ದಲಿತರ ಪರ ಎಂದು ಹೇಳುತ್ತಾರೆ. ಬಿಜೆಪಿಯವರೂ ಸಾವಿನ ಮನೆಯಲ್ಲೂ ಮೋದಿ ಮೋದಿ ಎಂದು ಕೂಗುತ್ತಾರೆ ಅದಕ್ಕೆ ಅರ್ಥವಿಲ್ಲ , ಒಂದು ಪಕ್ಷ ನಾನು ಗೆದ್ದು ಬಂದರೆ ಬಿಜೆಪಿಗೆ ಬೆಂಬಲ ನೀಡುವುದಿಲ್ಲ ಎಂದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 