ಬೆಂಗಳೂರು: ಸದ್ಯಕ್ಕೆ ರಾಜಕೀಯದಲ್ಲಿ ಆಸಕ್ತಿಯಿಲ್ಲ- ಅಭಿಷೇಕ್
ಬೆಂಗಳೂರು, ಮಾ.18: ಕೆಲವರು ಮಂಡ್ಯ ಜನರನ್ನು ನಮ್ಮಿಂದ ದೂರ ಇಡುವಂತಹ ಪ್ರಯತ್ನ ಮಾಡುತ್ತಿದ್ದು, ಅವರ ಪ್ರಯತ್ನ ಎಂದಿಗೂ ಫಲ ನೀಡದು ಎಂದು ದಿ.ಅಂಬರೀಷ್ ಪುತ್ರ ನಟ ಅಭಿಷೇಕ್ ಪರೋಕ್ಷವಾಗಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ರಾಜಕಾರಣದಲ್ಲಿ ಸದ್ಯಕ್ಕೆ ಆಸಕ್ತಿಯಿಲ್ಲ. ನಾನು ನಟ ಅಷ್ಟೆ. ನಟನಾಗಿ ಮುಂದುವರೆಯಲು ಇಚ್ಛಿಸುತ್ತೇನೆ. ನಟರನ್ನು ಜನರು ಬೆಳೆಸುತ್ತಾರೆಯೇ ಹೊರತು ಯಾವ ರಾಜಕಾರಣಿಯಲ್ಲ. ತಾಯಿಯ ಮೂಲಕ ರಾಜಕಾರಣಕ್ಕೆ ಪ್ರವೇಶ ಮಾಡುತ್ತೇನೆ ಎನ್ನುವುದು ಸುಳ್ಳು ಎಂದು ಅವರು ಸ್ಪಷ್ಟಪಡಿಸಿದರು.
ಸುಮಲತಾ ಅಂಬರೀಷ್ ಅವರಿಗೆ ಸಲಹೆ ನೀಡುವಷ್ಟು ನಾನಿನ್ನೂ ಬೆಳೆದಿಲ್ಲ. ಆದರೆ ಸ್ನೇಹಿತ ನಿಖಿಲ್ ಗೆ ಬುದ್ಧಿಮಾತು ಹೇಳುವಷ್ಟು ಬೆಳೆದಿದ್ದೇನೆ ಎನ್ನುವ ಮೂಲಕ ಜೆಡಿಎಸ್ ನಾಯಕರನ್ನು ಅವರು ಕುಟುಕಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 