ಬೆಂಗಳೂರು ವಿವಿ: ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ : ನಾಡಿಗೆ ಬೆಳಕುಕೊಟ್ಟ ದೀಮಂತ ಒಡೆಯರ್: ಪ್ರೊ. ಪಿ.ಸಿ. ನಾಗೇಶ್ ಅಭಿಪ್ರಾಯ
Bengaluru University: Nalwadi Krishnaraja Wodeyar Jayanti celebration: Dimanta Wodeyar who gave ligh
ಬೆಂಗಳೂರು 05 : ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಸಹಯೋಗದೊಂದಿಗೆ ಆಯೋಜಿಸಿದ್ದ ಆಧುನಿಕ ಮೈಸೂರು ನಿರ್ಮಾತೃ, ದಾರ್ಶನಿಕ ಆಡಳಿತಗಾರ ನಾಲ್ವಡಿ ಕೃಷ್ಣರಾಜ ಒಡೆಯರ್ 142ನೇ ಅವರ ಜಯಂತಿಯನ್ನು ವಿವಿಯ ಆಡಳಿತ ಕಚೇರಿಯ ಸೆನೆಟ್ ಹಾಲ್ ನಲ್ಲಿ ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬೆಂಗಳೂರು ವಿವಿಯ ಕುಲಪತಿಗಳಾದ ಪ್ರೊ. ಡಾ. ಎಸ್.ಎಂ. ಜಯಕರ್ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜೀವನ ಮತ್ತು ಸಾಧನೆಗಳಲ್ಲಿ ಪ್ರಮುಖವಾಗಿ ಆಧುನಿಕ ಮೈಸೂರಿನ ಶಿಲ್ಪಿಯಾಗಿ ನಾಡನ್ನು ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲ ಕೊಡುಗೆಗಳು ಅಪಾರ, ಶಾಲೆ- ಕಾಲೇಜುಗಳ ಸ್ಥಾಪನೆ, ವಾಣಿ ವಿಲಾಸ ಸಾಗರ, ಕೆ ಆರ್ ಎಸ್ ಅಣೆಕಟ್ಟುಗಳ ನಿರ್ಮಾಣ, ಜಲವಿದ್ಯುತ್ ಕೇಂದ್ರಗಳು, ಆಸ್ಪತ್ರೆಗೆ, ಕಸಾಪ, ಮೈಸೂರು ಬ್ಯಾಂಕ್ ಮುಂತಾದ ಸಮಗ್ರವಾದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದರು ಎಂದು ಸ್ಮಾರಿಸಿದರು.ನಾಲ್ವಡಿ ಕೃಷ್ಣರಾಜ ಒಡೆಯರು ಕೇವಲ ರಾಜರಾಗಿರಲಿಲ್ಲ, ಬದಲಾಗಿ ಅವರು ಪ್ರಜೆಗಳ ಏಳಿಗೆಗಾಗಿ ಬದುಕಿದ ಮಹಾನ್ ದಾರ್ಶನಿಕರಾಗಿದ್ದರು ಹಾಗೆಯೇ ಮೈಸೂರು ಸಂಸ್ಥಾನವನ್ನು ಮಾದರಿ ಮೈಸೂರು ಆಗಿ ರೂಪಿಸುವಲ್ಲಿ ಅವರ ಪಾತ್ರ ಅಪ್ರತಿಮವಾದುದು ಎಂದು ಬಣ್ಣಿಸಿದರು.
ಬೆಂಗಳೂರು ವಿವಿಯ ವಿದ್ಯಾರ್ಥಿ ಕಲ್ಯಾಣ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಭೂಗರ್ಭಶಾಸ್ತ್ರ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರಾದ ಪ್ರೊ. ಪಿ.ಸಿ. ನಾಗೇಶ್ ಅವರು ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮೈಗೂಡಿಸಿಕೊಂಡಿದ್ದ ಮಹಾನ್ ಆಡಳಿತಗಾರರಾಗಿದ್ದ ಅವರು, ಶಿಕ್ಷಣ, ಕೈಗಾರಿಕಾ, ನೀರಾವರಿ ಮತ್ತು ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಗಾಗಿ ಕೈಗೊಂಡ ಕ್ರಾಂತಿಕಾರಿ ನಿರ್ಧಾರಗಳು ಇಂದಿಗೂ ಇವರ ಆದರ್ಶಗಳನ್ನು ಪ್ರತಿಯೊಬ್ಬರಿಗೂ ಕೂಡ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.ಕೊನೆಯಲ್ಲಿ ಈ ಕಾರ್ಯಕ್ರಮದ ಆಯೋಜಕ ಹಾಗೂ ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಗೌರವಾಧ್ಯಕ್ಷ ಶೇಷಾದ್ರಿ ಜಿ.ಸಿ. ಮತ್ತು ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾರ್ಥಿ ಚಂದ್ರಕಲಾ ಅವರು ನಿರೂಪಣೆ ಮಾಡಿದರು.
ಇದೇ ವೇಳೆಯಲ್ಲಿ ರಾಮನಗರ ಪಿಜಿ ನಿರ್ದೇಶಕ ಪ್ರೊ.ಬಿ.ಗಂಗಾಧರ್, ಚಂದ್ರ್ಪ ಎಂ. ಮಿಡ್ಲುಮುನಿ, ಅಧ್ಯಕ್ಷ ಪ್ರಶಾಂತ್ ಎಂ.ಟಿ, ಗೌರವಾಧ್ಯಕ್ಷ ಶೇಷಾದ್ರಿ ಜಿ.ಸಿ, ರವಿಕುಮಾರ್, ಅಜಿತ್, ರವಣಪ್ಪ ಎನ್, ಪ್ರಶಾಂತ್ ರಾಜೇಂದ್ರ ಗೋಪಾಲ್, ಶಿವು. ಮುತ್ತುರಾಜು ಎಂ, ಗವಿಸಿದ್ದಯ್ಯ, ನಮ್ರತಾ, ಚೇತನ್ ಬೇಲೂರು, ವೆಂಕಟಪ್ಪ ಸೇರಿದಂತೆ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.ಫೋಟೋ ಕ್ಯಾಪ್ಷನ್:ಬೆಂಗಳೂರು ವಿಶ್ವವಿದ್ಯಾಲಯದ ಆಡಳಿತ ಕಚೇರಿಯಲ್ಲಿ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರಕ್ಕೆ ಬೆಂಗಳೂರು ಕುಲಪತಿ ಪ್ರೊ. ಜಯಕರ ಎಸ್.ಎಂ, ಪ್ರೊ. ಪಿ.ಸಿ. ನಾಗೇಶ್, ಪ್ರೊ.ಬಿ.ಗಂಗಾಧರ್, ಶೇಷಾದ್ರಿ ಜಿ.ಸಿ, ಇತರೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 