ಅಂತರಾಷ್ಟ್ರೀಯ ಅಜ್ರಾ ಸಮಾವೇಶದಲ್ಲಿ ಉತ್ತಮ ಸಂಶೋಧನಾ ಪ್ರಶಸ್ತಿ ಪ್ರದಾನ
ಗದಗ 18: ಗದಗ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಕೀಟಶಾಸ್ತ್ರಜ್ಞ ಹಾಗೂ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಸಿ. ಎಂ. ರಫಿಯವರಿಗೆ ಕೃಷಿ ವಿಶ್ವವಿದ್ಯಾಲಯ ರಾಯಚೂರಿನಲ್ಲಿ ನಡೆದ 17ನೆಯ ಅಜ್ರಾ ಅಂತರಾಷ್ಟ್ರೀಯ ಸಮಾವೇಶದಲ್ಲಿ ಉತ್ತಮ ಸಂಶೋಧನಾ ಮಂಡನೆಗೆ ದ್ವಿತೀಯ ಪ್ರಶಸ್ತಿ ಲಭಿಸಿದೆ. ಸುಮಾರು 400ಕ್ಕೂ ಹೆಚ್ಚು ವಿಜ್ಞಾನಿಗಳು ಭಾಗವಹಿಸಿದ್ದ ಸಮಾವೇಶದಲ್ಲಿ "ಸೋಯಾ ಅವರೆ ಬೆಳೆಯಲ್ಲಿ ಆಫ್ರೀಕಾದ ದೈತ್ಯ ಬಸವನ ಹುಳುವಿನ ಸಮರ್ಪಕ ನಿರ್ವಹಣೆ" ಕುರಿತಾದ ಸಂಶೋಧನಾ ಪ್ರಬಂಧದ ಮಂಡನೆಗೆ ಈ ಪ್ರಶಸ್ತಿ ಲಭಿಸಿದೆ. ಇದೇ ಸಮಾವೇಶದಲ್ಲಿ ಒಂದು ಅಧಿವೇಶನಕ್ಕೆ ಸಹ-ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ ಮತ್ತೊಂದು ಸಂಶೋಧನಾ ಪ್ರಬಂಧ "ಪೇರಲದಲ್ಲಿ ಆಫ್ರೀಕಾದ ದೈತ್ಯ ಬಸವನ ಹುಳು ನಿರ್ವಹಣೆ" ಕುರಿತು ಮೌಖಿಕ ಪ್ರಬಂಧ ಮಂಡಿಸಿದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 