ಅಂತರಾಷ್ಟ್ರೀಯ ಅಜ್ರಾ ಸಮಾವೇಶದಲ್ಲಿ ಉತ್ತಮ ಸಂಶೋಧನಾ ಪ್ರಶಸ್ತಿ ಪ್ರದಾನ
ಗದಗ 18: ಗದಗ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಕೀಟಶಾಸ್ತ್ರಜ್ಞ ಹಾಗೂ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಸಿ. ಎಂ. ರಫಿಯವರಿಗೆ ಕೃಷಿ ವಿಶ್ವವಿದ್ಯಾಲಯ ರಾಯಚೂರಿನಲ್ಲಿ ನಡೆದ 17ನೆಯ ಅಜ್ರಾ ಅಂತರಾಷ್ಟ್ರೀಯ ಸಮಾವೇಶದಲ್ಲಿ ಉತ್ತಮ ಸಂಶೋಧನಾ ಮಂಡನೆಗೆ ದ್ವಿತೀಯ ಪ್ರಶಸ್ತಿ ಲಭಿಸಿದೆ. ಸುಮಾರು 400ಕ್ಕೂ ಹೆಚ್ಚು ವಿಜ್ಞಾನಿಗಳು ಭಾಗವಹಿಸಿದ್ದ ಸಮಾವೇಶದಲ್ಲಿ "ಸೋಯಾ ಅವರೆ ಬೆಳೆಯಲ್ಲಿ ಆಫ್ರೀಕಾದ ದೈತ್ಯ ಬಸವನ ಹುಳುವಿನ ಸಮರ್ಪಕ ನಿರ್ವಹಣೆ" ಕುರಿತಾದ ಸಂಶೋಧನಾ ಪ್ರಬಂಧದ ಮಂಡನೆಗೆ ಈ ಪ್ರಶಸ್ತಿ ಲಭಿಸಿದೆ. ಇದೇ ಸಮಾವೇಶದಲ್ಲಿ ಒಂದು ಅಧಿವೇಶನಕ್ಕೆ ಸಹ-ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ ಮತ್ತೊಂದು ಸಂಶೋಧನಾ ಪ್ರಬಂಧ "ಪೇರಲದಲ್ಲಿ ಆಫ್ರೀಕಾದ ದೈತ್ಯ ಬಸವನ ಹುಳು ನಿರ್ವಹಣೆ" ಕುರಿತು ಮೌಖಿಕ ಪ್ರಬಂಧ ಮಂಡಿಸಿದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 