ಕೋರವಾರ ಪಿಕೆಪಿಎಸ್ ಗೆ ಅತ್ಯುತ್ತಮ ಪ್ರಶಸ್ತಿ ಪ್ರದಾನ
Best award presented to Korwar PKPS
ದೇವರಹಿಪ್ಪರಗಿ, 31 : ತಾಲೂಕಿನ ಕೋರವಾರ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಅಖಂಡ ಸಿಂದಗಿ ತಾಲ್ಲೂಕು ವ್ಯಾಪ್ತಿಯ ಅತ್ಯುತ್ತಮ ಪಿಕೆಪಿಎಸ್ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಶನಿವಾರದಂದು ವಿಜಯಪುರ ಡಿಸಿಸಿ ಬ್ಯಾಂಕಿನ ವಾರ್ಷಿಕ ಸರ್ವಸಾಧಾರಣ ಸಭೆ ಡಿಸಿಸಿ ಬ್ಯಾಂಕಿನ ಅಧ್ಯಕ್ಷರು ಹಾಗೂ ಜವಳಿ, ಸಕ್ಕರೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ಗುಣಮಟ್ಟದ ಸೇವೆ ನೀಡಿದ ಅಖಂಡ ಸಿಂದಗಿ ತಾಲೂಕು ವ್ಯಾಪ್ತಿಯ ಈ ವರ್ಷದ ಅತ್ಯುತ್ತಮ ಪಿಕೆಪಿಎಸ್ ಪ್ರಶಸ್ತಿಯನ್ನು ಕೋರವಾರ ಪಿಕೆಪಿಎಸ್ ಅಧ್ಯಕ್ಷರಾದ ಸಂಗಮೇಶ ಛಾಯಗೋಳ ಹಾಗೂ ಸಿಇಒ ಅವರಿಗೆ ಪ್ರಶಸ್ತಿ ನೀಡಿ, ಶುಭ ಹಾರೈಸಿ, ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ವ್ಹಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಗುಡದಿನ್ನಿ, ಡಿಸಿಸಿ ಬ್ಯಾಂಕ್ ಸಿಇಒ ಎಸ್.ಎ.ಢವಳಗಿ, ಸಹಕಾರ ಸಂಘಗಳ ಉಪ ನಿಬಂಧಕರಾದ ಎಸ್.ಕೆ. ಭಾಗ್ಯಶ್ರೀ, ನಿರ್ದೇಶಕರುಗಳಾದ ಬಿ.ಎಸ್.ಪಾಟೀಲ(ಯಾಳಗಿ), ಹಣುಮಂತ್ರಾಯಗೌಡ ಪಾಟೀಲ(ಪಡಗಾನೂರ) ಸೇರಿದಂತೆ ಡಿಸಿಸಿ ಬ್ಯಾಂಕಿನ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 