ಜೂ.7ರಿಂದ ಬೆಟಗೇರಿ ಮಾರುತಿ ದೇವರ ಓಕುಳಿ
Betageri Maruti Devara Okuli from June 7th
ಜೂ.7ರಿಂದ ಬೆಟಗೇರಿ ಮಾರುತಿ ದೇವರ ಓಕುಳಿ
ಬೆಟಗೇರಿ, 06 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿ ಶನಿವಾರ ಜೂ.7ರಿಂದ ಮಂಗಳವಾರ ಜೂ.10ರವರೆಗೆ ಜರುಗಲಿದೆ. ಜೂ.7ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಕುಂಕುಮ ಮತ್ತು ಮಹಾಪೂಜೆ, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡ ಪೂಜೆ, ನಂತರ ಕರಡಿ, ಹಲಗೆ ಮಜಲು ಸೇರಿದಂತೆ ಸಕಲ ವಾಧ್ಯಗಳ ವಾದನ, ಪಲ್ಲಕ್ಕಿ ಉತ್ಸವ ನಡೆಯಲಿದೆ. ಜೂ.8ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 5 ಗಂಟೆಗೆ ನಡು ಓಕುಳಿ. ಜೂ.9ರಂದು 8 ಗಂಟೆಯಿಂದ ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರೆ್ಣ ನಡೆದು, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರ ಪಲ್ಲಕ್ಕಿ ಪ್ರದಕ್ಷೀಣೆ ಬಳಿಕ ಕಡೆ ಓಕಳಿ ನಡೆಯಲಿದ್ದು, ವಿವಿಧ ಪ್ರಾಣಿಗಳ ಸೊಗಿನ ಕುಣಿತದ ಪ್ರದರ್ಶನ, ಅದೇ ದಿನ ರಾತ್ರಿ 10.30ಕ್ಕೆ ತುಳಸಿಗೇರಿ ಜೈ ಹನುಮಾನ ನಾಟ್ಯ ಸಂಘದವರಿಂದ ಶ್ರೀ ಕೃಷ್ಣಪಾರಿಜಾತ ಕಲಾಸಂಘದವರಿಂದ ನಾಟಕ ಪ್ರದರ್ಶನ ಜರುಗಲಿದೆ. ಮಂಗಳವಾರ ಜೂ.10ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 4 ಗಂಟೆಗೆ ಜಂಗಿ ಕುಸ್ತಿಗಳು ನಡೆದ ಬಳಿಕ ಸಂಜೆ ಮಾರುತಿ ದೇವರ ದೇವಾಲಯಕ್ಕೆ ಪಲ್ಲಕ್ಕಿ ಪ್ರರ್ದಕ್ಷಣೆ ನಡೆಯಲಿದೆ ಎಂದು ಇಲ್ಲಿಯ ಮಾರುತಿ ದೇವರ ಓಕುಳಿ ಉತ್ಸವ ಆಚರಣಾ ಸಮಿತಿ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 