ಭಗತ್ ಸಿಂಗ್, ಸುಖ್ದೇವ್, ರಾಜ್ಗುರು ಹುತಾತ್ಮ ದಿನ: ಮುಖ್ಯಮಂತ್ರಿ ಸೇರಿ ಗಣ್ಯರ ನಮನ
ಬೆಂಗಳೂರು, ಮಾ.23 ,ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖ್ದೇವ್ ಹಾಗೂ ರಾಜ್ಗುರು ಅವರ ಹುತಾತ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ನಮನ ಸಲ್ಲಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ, ಭಗತ್ ಸಿಂಗ್ ಅವರು, ಸುಖ್ ದೇವ್, ರಾಜ್ ಗುರು ಅವರೊಟ್ಟಿಗೆ ದೇಶದ ದಾಸ್ಯ ಮುಕ್ತಿಗಾಗಿ ನೇಣಿಗೆ ಕೊರಳೊಡ್ಡಿ ಹುತಾತ್ಮರಾದ ದಿನವಿದು. ಸ್ವಾತಂತ್ರ್ಯದೆಡೆಗಿನ ಅವರ ತುಡಿತ, ದೇಶಪ್ರೇಮ, ತ್ಯಾಗಗಳಿಗೆ ಕೋಟಿ ಕೋಟಿ ನಮನಗಳು ಎಂದು ತಿಳಿಸಿದ್ದಾರೆ.ಉಪ ಮುಖ್ಯಮಂತ್ರಿ ಗೋವಿಂದ ಕಾರಜೊಳ ಟ್ವೀಟ್ ಮಾಡಿ, ಬ್ರಿಟಿಷರಿಂದ ಭಾರತವನ್ನು ಸ್ವತಂತ್ರಗೊಳಿಸಲು ಕಿರಿಯ ವಯಸ್ಸಿನಲ್ಲೇ ಪ್ರಾಣಾರ್ಪಣೆ ಮಾಡಿದ ಈ ಮಹಾನ್ ದೇಶಭಕ್ತರನ್ನು ನಾವೆಲ್ಲರೂ ಸ್ಮರಿಸೋಣ ಎಂದು ತಿಳಿಸಿದ್ದಾರೆ.ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿ, ಸ್ವಾತಂತ್ರ್ಯ ಹೋರಾಟಗಾರರು, ಕ್ರಾಂತಿಕಾರಿಗಳಾದ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಈ ದಿನ ಹುತಾತ್ಮರ ದಿನವಾಗಿ ಆಚರಣೆ ಮಾಡಲಾಗುತ್ತದೆ. ಅವರ ತ್ಯಾಗ ಬಲಿದಾನವನ್ನು ಗೌರವಪೂರ್ವಕವಾಗಿ ನೆನೆಯುತ್ತೇವೆ ಎಂದು ತಿಳಿಸಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 